ಕರ್ನಾಟಕ ಲಲಿತಕಲಾ ಅಕಾಡೆಮಿಯು ಪ್ರತೀ ವರ್ಷ 3 ಕಲಾವಿದರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಯನ್ನು ಈ ಬಾರಿ 6 ಕಲಾವಿದರಿಗೆ ನೀಡಲಾಗುತ್ತದೆ ಎಂದು ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಮಹೇಂದ್ರ ತಿಳಿಸಿದ್ದಾರೆ.
ಲಲಿತಕಲಾ ಅಕಾಡೆಮಿ ಸಭಾಂಗಣದಲ್ಲಿ ಮಾತನಾಡಿದ ಅವರು, ಚಿತ್ರಕಲಾ ಕ್ಷೇತ್ರದದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಲಾಸಾಧನೆ ಮಾಡಿರುವ, ಕೊಡವ ಸಂಸ್ಕೃತಿ ಪ್ರತಿನಿಧಿಸುತ್ತಿರುವ ಮಡಿಕೇರಿಯ ಸ್ಮಿತಾ ಕಾರಿಯಪ್ಪ ಸಹಿತ 6 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 50,000 ರೂ. ನಗದು , ಪ್ರಮಾಣ ಪತ್ರವನ್ನು ಹೊಂದಿದೆ ಎಂದು ತಿಳಿಸಿದರು.
ವಾರ್ಷಿಕ ಕಲಾ ಬಹುಮಾನ ಸ್ಪರ್ಧೆಗೆ ಬಂದ ಕಲಾಕೃತಿಯಲ್ಲಿ 85 ಕಲಾಕೃತಿಯನ್ನು ಆಯ್ಕೆ ಮಾಡಲಾಗಿದೆ.
ಅದರಲ್ಲಿ ಉತ್ತಮ 10 ಕಲಾಕೃತಿಗಳನ್ನು ಆಯ್ಕೆಯಾಗಿದೆ. ಈ ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಮಾಣ ಪತ್ರವನ್ನು ಹೊಂದಿದೆ ಎಂದರು.
50ನೇ ವಾರ್ಷಿಕ ಕಲಾ ಪ್ರದರ್ಶನ ಸುವರ್ಣ ಸಂದರ್ಭದ ನೆನಪಿಗೆ ವಿಶೇಷ ಮನ್ನಣೆ ನೀಡಿ ಐವರ ಕಲಾಕೃತಿಗೆ ಮೆಚ್ಚುಗೆ ಪ್ರಶಸ್ತಿ ಲಭಿಸಿದೆ. ಕಲಾವಿದರಿಗೆ ಸ್ಮರಣಿಕೆ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು.