Wednesday, March 25, 2026
Wednesday, March 25, 2026

ಭೂಮಿ ಪ್ರೇಮಿಗಳಾಗೋಣ

Date:

ಭೂಮಿ ದಿನ ಏಪ್ರಿಲ್ 22 ರಂದು ವಿಶ್ವಾದ್ಯಂತ ಆಚರಿಸಲಾಗುವ ವಾರ್ಷಿಕ ಭೂ ದಿನಾಚರಣೆಯಾಗಿದೆ.

ಪರಿಸರ ರಕ್ಷಣೆ ಬೆಂಬಲವನ್ನು ವಿವಿಧ ಪ್ರದರ್ಶನಗಳ ಮೂಲಕ ನಡೆಸಲಾಗುತ್ತದೆ. 1970 ರಲ್ಲಿ ಮೊದಲ ಭೂಮಿ ದಿನ ಆಚರಿಸಲಾಯಿತು.

193 ರಾಷ್ಟ್ರಗಳಲ್ಲಿ ಈ ದಿನ ಆಚರಿಸಲಾಗುತ್ತದೆ. ಇದನ್ನು ಭೂಮಿ ದಿನ ನೆಟ್ವರ್ಕ್ ಜಾಗತಿಕವಾಗಿ ಸಂಬಂಧ ಹೊಂದಿವೆ. 1990ರ ಹೊತ್ತಿನಲ್ಲಿ ಒಂದು ಪರಿಸರ ಆಂದೋಲನವಾಗಿ ರೂಪುಗೊಂಡ ಭೂ ದಿನಾಚರಣೆಯನ್ನು ಇಂದು ಬಹುತೇಕ ರಾಷ್ಟ್ರಗಳಲ್ಲಿ ಪರಿಸರ ಪರ ಚಿಂತನೆಯನ್ನು ಬಿತ್ತುವ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ.

ಈ ವಿಶೇಷ ದಿನದಂದು, ಮಿತಿಮೀರಿದ ಜನಸಂಖ್ಯೆ, ಜೀವವೈವಿಧ್ಯತೆಯ ನಷ್ಟ, ಓಝೋನ್ ಪದರದ ಸವಕಳಿ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಸೇರಿದಂತೆ ಹಲವು ಪರಿಸರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು, ಜವಾಬ್ದಾರಿಯಿಂದ ವರ್ತಿಸಲು ಈ ದಿನವನ್ನು ಮೀಸಲಿಡಲಾಗಿದೆ.

ಪ್ರತಿ ವರ್ಷವೂ ಭೂ ದಿನಾಚರಣೆಯನ್ನು ಒಂದೊಂದು ಉದ್ದೇಶವನ್ನಿಟ್ಟುಕೊಂಡು ಆಚರಿಸಲಾಗುತ್ತದೆ. ಅಂದಿನಿಂದ ಮುಂದಿನ ಭೂ ದಿನಾಚರಣೆಯ ತನಕ ಅದರ ಉದ್ದೇಶವನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸಲಾಗುತ್ತದೆ. ಅಂತೆಯೇ ಈ ಬಾರಿಯ ವಿಶ್ವ ಭೂ ದಿನಾಚರಣೆಯನ್ನು ‘ಭೂಮಿಯನ್ನು ಪುನರ್​ ನಿರ್ಮಿಸೋಣ’ ಎಂಬ ಸದುದ್ದೇಶದೊಂದಿಗೆ ಆಚರಿಸಲಾಗುತ್ತಿದೆ.

ವಿಶ್ವ ಭೂ ದಿನಾಚರಣೆ ಎನ್ನುವುದು ಯಾವುದೋ ಒಂದು ಸಂಸ್ಥೆಗೆ ಮೀಸಲಾದ ದಿನಾಚರಣೆಯಲ್ಲ. ಈ ಭೂಮಿಯನ್ನು ಹಾಳುಗೆಡವಲು ಪ್ರತ್ಯಕ್ಷ ಅಥವಾ ಪರೋಕ್ಷ ಕಾರಣವಾಗಿರುವ ಪ್ರತಿ ಮನುಷ್ಯನೂ ಇದರ ಮಹತ್ವವನ್ನು ಅರಿತು ತನ್ನನ್ನು ತಾನು ತಿದ್ದಿಕೊಂಡು ಮುನ್ನಡೆಯಲು ಈ ದಿನಾಚರಣೆ ಒಂದು ಮಾರ್ಗ.

ನಮ್ಮ ಸುತ್ತಮುತ್ತಲೂ ಭೂಮಿಗೆ ಮಾರಕವಾಗುವಂತಹ ಅದೆಷ್ಟೋ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಅದನ್ನು ನಿಲ್ಲಿಸಲು ಪ್ರಯತ್ನಿಸಿ, ಅದರಲ್ಲಿ ತೊಡಗಿಸಿಕೊಂಡವರಲ್ಲಿ ತಿಳುವಳಿಕೆ ಮೂಡಿಸಿದರೆ ಅದು ಕೂಡಾ ನಾವು ಮಾಡಬಹುದಾದ ಅತ್ಯುತ್ತಮ ಕಾರ್ಯ.

ಅಲ್ಲದೇ ಪ್ರಸ್ತುತ ಸಂದರ್ಭದಲ್ಲಿ ಭೂಮಂಡಲಕ್ಕೆ ಮಾರಕವಾಗಿರುವ ಅಂಶಗಳತ್ತ ಗಮನಹರಿಸಿ ಅದನ್ನು ಎಲ್ಲರಿಗೂ ತಲುಪಿಸುವ ಕೆಲಸವನ್ನೂ ಕೈಗೊಂಡು ವರ್ಷಪೂರ್ತಿ ವಿಶ್ವ ಭೂ ದಿನಾಚರಣೆಯ ಉದ್ದೇಶವನ್ನು ಸಾಕಾರಗೊಳಿಸುವತ್ತ ಹೆಜ್ಜೆ ಹಾಕಬಹುದು. ಭೂಮಿಯು ತನ್ನಲ್ಲೇ ತಾನು ಒಂದು ಅದ್ಭುತ, ವಿಸ್ಮಯ… ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹಲವಾರು ಜೀವಸಂಕುಲಗಳನ್ನು ತನ್ನೊಳಗೆ ಇಟ್ಟುಕೊಂಡು ಕಾಪಾಡುತ್ತಿದೆ.
ಭೂಮಿಯನ್ನು ಕಾಪಾಡುವ ಹಾಗೂ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...