ಶಿವಮೊಗ್ಗ ಡಿವೈಎಸ್ ಪಿಯಾಗಿ ಬಾಲರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಇವರು ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಇನ್ನು ಡಿವೈಎಸ್ಪಿ ಆಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.