Thursday, May 21, 2026
Thursday, May 21, 2026

ಬಾಗಲಕೋಟೆ ಭಾಗದ ನೀರಾವರಿ ಯೋಜನೆ ಶೀಘ್ರ ಪೂರ್ಣ- ಬೊಮ್ಮಾಯಿ

Date:

ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿಮಾಡುತ್ತಿದ್ದಾರೆ ಎನಿಸುತ್ತಿದೆ. ಅಮ್ ಆದ್ಮಿಯ ಮುಖಂಡ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಮಾತನಾಡುತ್ತಾ, ತಮ್ಮ ರಾಜ್ಯದಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಬಗ್ಗೆ ತಿಳಿಸಿದ್ದರು.

ಈಗ ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಅವರು ಎಸಿ ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡುವ ಯೋಜನೆಯಿದೆ ಎಂದು ಮಾಹಿತಿ ತಿಳಿಸಿದ್ದಾರೆ.

ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಮಹತ್ವದ ಯೋಜನೆಯ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಎಸ್ ಸಿ ಎಸ್ಟಿ ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಈ ಭಾಗದ ರೈತರ ಬಹುದಿನದ ಬೇಡಿಕೆಯಾಗಿರುವ ಸಾಲಟ್ಟಿ ಶಿವಲಿಂಗೇಶ್ವರ ಹಾಗೂ ಮಂಟೂರ ಮಹಾಲಕ್ಷ್ಮೀ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಮುಧೋಳ ನಗರದ ಆರ್ ಎಂಜಿ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ವಿವಿಧ ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮುಧೋಳದ ಜನರ ನಾಡಿಮಿಡಿತ ಅರಿತಿರುವ ಸಚಿವ ಗೋವಿಂದ ಕಾರಜೋಳ ಅವರು ಈ ಭಾಗದ ಎಲ್ಲ ಬೇಕು ಬೇಡಿಕೆಗಳನ್ನು ಪೂರೈಸುವತ್ತ ಹೆಚ್ಚು ಗಮನ ಹರಿಸಿದ್ದಾರೆ.

ನೆಲ, ಜಲ, ಭಾಷೆ ಅಭಿವೃದ್ಧಿಗಾಗಿ ನಾವು ಯಾವುದೇ ರೀತಿಯ ರಾಜಕಾರಣಕ್ಕೆ ಮುಂದಾಗುವುದಿಲ್ಲ. ಸರ್ವಜನರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತದೆ ಎಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಸ್ರ್ತೀಶಕ್ತಿ ಅಭಿವೃದ್ಧಿಗೆ ಆಯಂಕರ್ ಬ್ಯಾಂಕಿಂಗ್, ಹಾಲು ಉತ್ಪಾದಕರಿಗೆ ನಂದಿನಿ ಕ್ಷೀರ ಬ್ಯಾಂಕ್, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲರ ಮಾಸಾಶನ ಹೆಚ್ಚಳದಂತಹ ಅನೇಕ ರೀತಿ ಅಭಿವೃದ್ಧಿಯ ಕಾರ್ಯನಿರ್ವಹಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದವರಿಗಾಗಿ 75 ಯೂನಿಟ್ ವಿದ್ಯುತ್ ಉಚಿತ ವಿತರಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...