Wednesday, December 17, 2025
Wednesday, December 17, 2025

ಹೆಣ್ಣುಮಕ್ಕಳಿಗೆ ಶಿಕ್ಷಣ ಆಗ್ರಹಿಸಿ ಬ್ರಿಟನ್ ಭಾರತ ಜಂಟಿ ಹೇಳಿಕೆ

Date:

ಅಫ್ಘಾನಿಸ್ತಾನದಲ್ಲಿನ ಈಗಿನ ಪರಿಸ್ಥಿತಿ ಹಾಗೂ ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಬ್ರಿಟನ್ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

ಹೆಣ್ಣುಮಕ್ಕಳಿಗೆ ಶಿಕ್ಷಣಕ್ಕೆ ಅವಕಾಶ ನೀಡಬೇಕೆಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಜಂಟಿಯಾಗಿ ಒತ್ತಾಯಿಸಿದ್ದಾರೆ.

ಈ ಕುರಿತು ವಿದೇಶಾಂಗ ಇಲಾಖೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ತಾಲಿಬಾನ್ ಸರ್ಕಾರ ಅಲ್ಲಿನ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅಫ್ಘಾನಿಸ್ತಾನದ ಜನರಿಗೆ ವೈದ್ಯಕೀಯ ಮತ್ತು ಆಹಾರ ಧಾನ್ಯಗಳ ನೆರವು ನೀಡುವಲ್ಲಿ ಭಾರತ ವಹಿಸಿದ ಪಾತ್ರವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಶ್ಲಾಘಿಸಿದ್ದಾರೆ.

ಇದರ ಜೊತೆಗೆ ಆಫ್ಘನ್ ಪ್ರದೇಶವನ್ನು ಭಯೋತ್ಪಾದಕ ಕೃತ್ಯಗಳಿಗೆ ಆಶ್ರಯತಾಣವಾಗಿ ಬಳಸಲು ಮತ್ತು ಉಗ್ರ ಕೃತ್ಯಗಳಿಗೆ ಹಣಕಾಸು ಒದಗಿಸಲು ಬಳಸದಂತೆ ಎರಡು ರಾಷ್ಟ್ರಗಳು ಒತ್ತಾಯಿಸಿವೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಉಭಯ ರಾಷ್ಟ್ರಗಳು ಅಫ್ಘಾನಿಸ್ತಾನದ ಜನರಿಗೆ ತಕ್ಷಣದ ಮಾನವೀಯ ನೆರವು ನೀಡುವುದನ್ನು ಮುಂದುವರಿಸಲು ಒಪ್ಪಿಕೊಂಡಿದೆ. ಶಾಂತಿಯುತ, ಸುರಕ್ಷಿತ ಅಫ್ಘಾನಿಸ್ತಾನವನ್ನು ಬೆಂಬಲಿಸಲು ಮತ್ತು ಮುಕ್ತ ಹಾಗೂ ಸುರಕ್ಷಿತ ಇಂಡೋ ಪೆಸಿಫಿಕ್‌ಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು.

ಭಾರತ,ಯುಕೆ ರಕ್ಷಣಾ ಮತ್ತು ಅಂತರಾಷ್ಟ್ರೀಯ ಭದ್ರತಾ ಪಾಲುದಾರಿಕೆ ಚೌಕಟ್ಟಿನ ಅಡಿಯಲ್ಲಿ ಬರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವುದು, ಹಾಗೂ ವಿಶ್ವಾಸಾರ್ಹ ಪಾಲುದಾರರಾಗಿ ಸಹಕಾರವನ್ನು ತೀವ್ರಗೊಳಿಸುವುದು ಸೇರಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಕಾರ ನೀಡಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...