Tuesday, December 16, 2025
Tuesday, December 16, 2025

ಶಿವಮೊಗ್ಗ ಕಂಟ್ರಿ ಕ್ಲಬ್ ನಲ್ಲಿ ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನೆ

Date:

ಪ್ರತಿಷ್ಠಿತ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಡಿ. ಎಸ್. ಅರುಣ್ ಅವರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಅತ್ಯಾಧುನಿಕ ವ್ಯವಸ್ಥೆಯೊಂದಿಗೆ 5 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ದೊಡ್ಡ ಕ್ರೀಡಾ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕ್ರೀಡಾ ಸಂಕೀರ್ಣ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

1991 ರಲ್ಲಿ ಸಮಾನವಯಸ್ಕರು ಸೇರಿ ತುಂಗಾನದಿ ತೀರದಲ್ಲಿ ಮೂರುವರೆ ಎಕರೆ ಪ್ರದೇಶದಲ್ಲಿ ಆರಂಭವಾದ ಶಿವಮೊಗ್ಗ ಕಂಟ್ರಿ ಕ್ಲಬ್ ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಆಗಿರುತ್ತದೆ. ಪ್ರಭಾವಿ ಸಂಸ್ಥೆಯಲ್ಲಿ ಸದೃಢವಾಗಿ ರೂಪುಗೊಳ್ಳುತ್ತ ಸಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಡಿ.ಎಸ್. ಅರುಣ್ ಅವರು ಹೇಳಿದರು.

ಶಿವಮೊಗ್ಗ ಕಂಟ್ರಿ ಕ್ಲಬ್ ನಲ್ಲಿ 1200 ಸದಸ್ಯರು ಇದ್ದಾರೆ. ಎಲ್ಲಾ ಸದಸ್ಯರ ಸಹಕಾರದಿಂದ ಸಕಲ ರೀತಿಯಲ್ಲಿ ಅನುಕೂಲ ಹಾಗೂ ಸೌಲಭ್ಯ ಒದಗಿಸಲಾಗುತ್ತಿದೆ. 1200 ಸಕ್ರಿಯ ಸದಸ್ಯರಿಗೆ ಕ್ರೀಡಾ ಚಟುವಟಿಕೆಗೆ ಪೂರ್ವಕವಾಗಿ ಅನುಕೂಲವಾಗುವಂತೆ ಕ್ರೀಡಾ ಸಂಕೀರ್ಣ ರೂಪಿಸಲಾಗಿದೆ. ರೆಸ್ಟೋರೆಂಟ್ ವ್ಯವಸ್ಥೆಯಿದೆ. ಎಲ್ಲ ಸದಸ್ಯರ ಕನಸು ಮತ್ತು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶಿವಮೊಗ್ಗ ಕಂಟ್ರಿಕ್ಲಬ್ ವೇದಿಕೆಯಾಗಿ ಕೆಲಸ ಮಾಡಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶಿವಮೊಗ್ಗ ಕಂಟ್ರಿ ಕ್ಲಬ್ ಸದಸ್ಯರ ಅನುಕೂಲಕ್ಕಾಗಿ ಎಲ್ಲಾ ಸೌಲಭ್ಯ ಒಳಗೊಂಡಿರುವ ನೂತನ ಕ್ರೀಡಾ ಸಂಕೀರ್ಣದ ಒಳಾಂಗಣ ಶೇಟಲ್ ಕೋರ್ಟ್, ಬ್ಯಾಂಕೆಟ್ವ ಹಾಲ್, ಹೋಂ ಥಿಯೇಟರ್, ಬೌಲಿಂಗ್, ಮೋಶನ್ ಕ್ರಿಕೆಟ್, ಕೇರಂ, ಚೆಸ್, ಅಧ್ಯಯನ ಕೊಠಡಿ, ಜಿಮ್ ಹೀಗೆ ಹಲವಾರು ಉತ್ತಮ ಹಾಗೂ ಅತ್ಯಾಧುನಿಕ ಸೌಕರ್ಯದ ವ್ಯವಸ್ಥೆ ರೂಪಿಸಲಾಗಿದೆ ಎಂದು ಡಿ.ಎಸ್. ಅರುಣ್ ಕುಮಾರ್ ಅವರು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ. ರಘುರಾಮ್, ಸೂಡಾ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಶಿವಮೊಗ್ಗ ಮತ್ತು ರಾಜ್ಯದ ಪ್ರಮುಖ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಎಲ್ಲಾ ಸದಸ್ಯರ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹದಿಂದ ಕ್ರೀಡಾ ಸಂಕೀರ್ಣದ ನಿರ್ಮಾಣ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸುವ ಆಶಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕಿರಣದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಭೂಪಾಳಂ ಶಶಿಧರ್, ಕಾರ್ಯದರ್ಶಿ ಜಿ.ಎನ್. ಪ್ರಕಾಶ್, ಉಪಾಧ್ಯಕ್ಷರಾದ ಎಚ್. ಜಿ. ಅಶೋಕ್, ಖಜಾಂಚಿ ಮದನ್ ಲಾಲ್, ನಿರ್ದೇಶಕರಾದ ಕಡಿದಾಳ್ ಸದಾನಂದ್ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...