ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ಉಚಿತ ಕುಡಿಯುವ ನೀರಿನ ಸಂಚಾರಿ ವಾಹನವನ್ನು ಇಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.
ಶಿವಮೊಗ್ಗದ ಜನರಿಗೆ ಬೇಸಿಗೆಯಲ್ಲಿ ತಂಪು ನೀಡುವ ಸುದ್ದಿ ಇದಾಗಿದೆ. ಬಸ್ ನಿಲ್ದಾಣದಲ್ಲಿ ಅನೇಕರಿಗೆ ಬಾಯಾರಿಕೆ ನೀಗಿಸುವ ಪರೋಪಕಾರಿ ಚಟುವಟಿಕೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ.
ಸಾರ್ವಜನಿಕರಿಗೆ ಹಾಗೂ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಪಾನಕ, ಮಜ್ಜಿಗೆ ಹಾಗೂ ನೀರನ್ನು ವಿತರಿಸಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಲ್ಲೆಲ್ಲಿ ಸಾರ್ವಜನಿಕರು ಇರುತ್ತಾರೋ ಮತ್ತು ಎಲ್ಲೆಲ್ಲಿ ನೀರಿನ ಅಗತ್ಯವಿದಿಯೋ, ಅಲ್ಲಲ್ಲಿ ವಾಹನವನ್ನು ನಿಲ್ಲಿಸಿ ಅವರಿಗೆ ನೀರು ಮಜ್ಜಿಗೆ ಹಾಗೂ ಪಾನಕವನ್ನು ವಿತರಿಸಲಾಗುತ್ತದೆ.
ಪ್ರತಿ ಸೋಮವಾರ ಬೆಲ್ಲದ ಪಾನಕ,ಹಾಗೂ ಗುರುವಾರ ಮಜ್ಜಿಗೆ ಯನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತದೆ. ಪ್ರತಿದಿನ ಸುಮಾರು 500 ಲೀಟರ್ ಮಜ್ಜಿಗೆ ಅಥವಾ ಪಾನಕವನ್ನು ವಿತರಿಸಲಾಗುತ್ತದೆ. ಇದರಿಂದ ಸುಮಾರು ನಾಲ್ಕು ಸಾವಿರ ಜನರಿಗೆ ಉಪಯೋಗವಾಗುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.