Saturday, February 7, 2026
Saturday, February 7, 2026

ಕಾಂಗ್ರೆಸ್ ನಿಂದ ಬೇಸಿಗೆ ದಾಹ ನೀಗುವ ಸಾಮಾಜಿಕಸೇವೆ

Date:

ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ಉಚಿತ ಕುಡಿಯುವ ನೀರಿನ ಸಂಚಾರಿ ವಾಹನವನ್ನು ಇಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.

ಶಿವಮೊಗ್ಗದ ಜನರಿಗೆ ಬೇಸಿಗೆಯಲ್ಲಿ ತಂಪು ನೀಡುವ ಸುದ್ದಿ ಇದಾಗಿದೆ. ಬಸ್ ನಿಲ್ದಾಣದಲ್ಲಿ ಅನೇಕರಿಗೆ ಬಾಯಾರಿಕೆ ನೀಗಿಸುವ ಪರೋಪಕಾರಿ ಚಟುವಟಿಕೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ.

ಸಾರ್ವಜನಿಕರಿಗೆ ಹಾಗೂ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಪಾನಕ, ಮಜ್ಜಿಗೆ ಹಾಗೂ ನೀರನ್ನು ವಿತರಿಸಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಲ್ಲೆಲ್ಲಿ ಸಾರ್ವಜನಿಕರು ಇರುತ್ತಾರೋ ಮತ್ತು ಎಲ್ಲೆಲ್ಲಿ ನೀರಿನ ಅಗತ್ಯವಿದಿಯೋ, ಅಲ್ಲಲ್ಲಿ ವಾಹನವನ್ನು ನಿಲ್ಲಿಸಿ ಅವರಿಗೆ ನೀರು ಮಜ್ಜಿಗೆ ಹಾಗೂ ಪಾನಕವನ್ನು ವಿತರಿಸಲಾಗುತ್ತದೆ.

ಪ್ರತಿ ಸೋಮವಾರ ಬೆಲ್ಲದ ಪಾನಕ,ಹಾಗೂ ಗುರುವಾರ ಮಜ್ಜಿಗೆ ಯನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತದೆ. ಪ್ರತಿದಿನ ಸುಮಾರು 500 ಲೀಟರ್ ಮಜ್ಜಿಗೆ ಅಥವಾ ಪಾನಕವನ್ನು ವಿತರಿಸಲಾಗುತ್ತದೆ. ಇದರಿಂದ ಸುಮಾರು ನಾಲ್ಕು ಸಾವಿರ ಜನರಿಗೆ ಉಪಯೋಗವಾಗುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...