ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲವೂ ತನಿಖೆ ಆಗುತ್ತದೆ. ನಾನು ಆ ಆಡಿಯೋ ನೋಡಿಲ್ಲ.ಆಡಿಯೋ ಇಬ್ಬರ ಮದ್ಯೆ ಮಾತುಕತೆ ಆಗಿದೆ. ಆ ಇಬ್ಬರು ಯಾರು? ಅವರ ಅರ್ಹತೆ, ಕ್ರೆಡಿಬಿಲಿಟಿ ಏನು? ಎಲ್ಲವೂ ತನಿಖೆ ಆಗುತ್ತದೆ. ಆಡಿಯೋ ಕೂಡ ತನಿಖೆಗೆ ಒಳಪಡಿಸುತ್ತೇವೆ. ಯಾರೇ ತಪ್ಪಿತಸ್ಥರು ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.
ಸಿಜೆ ಹಾಗೂ ಸಿಎಂ ಕಾನ್ಫರೆನ್ಸ್ ಇದೆ. ಆದ್ದರಿಂದ, ದೆಹಲಿಗೆ ಹೋಗುತ್ತೇನೆ. ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿರುವ ಪ್ರಕರಣ ನನಗೆ ಗೊತ್ತಿಲ್ಲ. ನಾನು ಕಮಿಷನರ್ ಜೊತೆಗೆ ಮಾತನಾಡುತ್ತೇನೆ. ಶಾಂತಿ ಕದಡಲು ಆಗಾಗ ಇಂಥ ಪ್ರಯತ್ನ ಆಗುತ್ತಿದೆ. ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ತನಿಖೆ ಮಾಡುತ್ತೇವೆ. ಇಮೇಲ್ ಟ್ರ್ಯಾಕ್ ಮಾಡಿ ತನಿಖೆ ಮಾಡುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.