Wednesday, January 21, 2026
Wednesday, January 21, 2026

ಖರ್ಗೆ ಅವರು ಬಿಡುಗಡೆ ಮಾಡಿರುವ ವಿಡಿಯೋ ತನಿಖೆ ಮಾಡಿಸುತ್ತೇವೆ-ಸಿಎಂ

Date:

ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲವೂ ತನಿಖೆ ಆಗುತ್ತದೆ. ನಾನು ಆ ಆಡಿಯೋ ನೋಡಿಲ್ಲ.ಆಡಿಯೋ ಇಬ್ಬರ ಮದ್ಯೆ ಮಾತುಕತೆ ಆಗಿದೆ. ಆ ಇಬ್ಬರು ಯಾರು? ಅವರ ಅರ್ಹತೆ, ಕ್ರೆಡಿಬಿಲಿಟಿ ಏನು? ಎಲ್ಲವೂ ತನಿಖೆ ಆಗುತ್ತದೆ. ಆಡಿಯೋ ಕೂಡ ತನಿಖೆಗೆ ಒಳಪಡಿಸುತ್ತೇವೆ. ಯಾರೇ ತಪ್ಪಿತಸ್ಥರು ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಿಜೆ ಹಾಗೂ ಸಿಎಂ ಕಾನ್ಫರೆನ್ಸ್ ಇದೆ. ಆದ್ದರಿಂದ, ದೆಹಲಿಗೆ ಹೋಗುತ್ತೇನೆ. ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿರುವ ಪ್ರಕರಣ ನನಗೆ ಗೊತ್ತಿಲ್ಲ. ನಾನು ಕಮಿಷನರ್ ಜೊತೆಗೆ ಮಾತನಾಡುತ್ತೇನೆ. ಶಾಂತಿ ಕದಡಲು ಆಗಾಗ ಇಂಥ ಪ್ರಯತ್ನ ಆಗುತ್ತಿದೆ. ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ತನಿಖೆ ಮಾಡುತ್ತೇವೆ. ಇಮೇಲ್ ಟ್ರ್ಯಾಕ್ ಮಾಡಿ ತನಿಖೆ ಮಾಡುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...