Monday, August 24, 2026
Monday, August 24, 2026

ಬಡಮಕ್ಕಳಿಗೆ ಉದ್ಯೋಗ ನೀಡಿಕೆ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ-ಕುಮಾರ ಸ್ಬಾಮಿ

Date:

ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

ಬೀದರ್‌ನಲ್ಲಿ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಷ್ಟೇ ಅಲ್ಲ. ಸಹಕಾರಿ ಕ್ಷೇತ್ರದಲ್ಲಿಯೂ ಸರ್ಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆ 25ರಿಂದ 50 ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಇದುವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು. ಮತ್ತು ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಲಿ ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...