Monday, August 24, 2026
Monday, August 24, 2026

ಸೆಪ್ಟೆಂಬರ್ 23 ಕ್ಕೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

Date:

ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಸೆಪ್ಟೆಂಬರ್ 23 ರಿಂದ 3 ದಿನಗಳ ಕಾಲ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಕೊರೋನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿರಲಿಲ್ಲ.

ಆದ್ದರಿಂದ, ಈ ಬಾರಿ ದಸರಾ ಉತ್ಸವದಂತೆ ಅದ್ದೂರಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ರಾಜ್ಯ ಸರ್ಕಾರ 20 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಿದೆ.

ಹಾವೇರಿಯ ಹಳೆ ನ್ಯಾಷನಲ್ ಹೈವೇ ರಸ್ತೆಯಲ್ಲಿರುವ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿ 22 ಎಕರೆ ಜಾಗದಲ್ಲಿ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಹಾವೇರಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರ ತವರು ಜಿಲ್ಲೆ ಕೂಡ ಎಂಬುದು ಗಮನಾರ್ಹ ಸಂಗತಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...