Thursday, March 26, 2026
Thursday, March 26, 2026

ಆರ್ಥಿಕ ಪಲಾಯನಕಾರರನ್ನ ಬ್ರಿಟನ್ ಸ್ವಾಗತಿಸುವುದಿಲ್ಲ-ಜಾನ್ಸನ್

Date:

ಭಾರತೀಯ ಬ್ಯಾಂಕ್ ಗಳಿಗೆ ಬಹುಕೋಟಿ ವಂಚನೆ ಮಾಡಿ ಬ್ರಿಟನ್ ಗೆ ಪಲಾಯನ ಗೈದಿರುವ ಉದ್ಯಮಿಗಳಾದ ನೀರವ್ ಮೋದಿ ಹಾಗೂ ವಿಜಯ್ ಮಲ್ಯಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಘಾತ ನೀಡಿದ್ದಾರೆ.

ಆರ್ಥಿಕ ಪಲಾಯನಕಾರರು, ಉಗ್ರಗಾಮಿಗಳನ್ನು ಬ್ರಿಟನ್‌ನಲ್ಲಿ ಸ್ವಾಗತಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈಗ ಭಾರತ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು, ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತ ಮತ್ತು ಬ್ರಿಟನ್ ದ್ವಿಪಕ್ಷೀಯ ಚರ್ಚೆಯಲ್ಲಿ ಆರ್ಥಿಕ ಅಪರಾಧಿಗಳು ಹಾಗೂ ಖಲಿಸ್ತಾನಿ ಗುಂಪುಗಳ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದಾಗಿ ವಿವರಿಸಿದ್ದಾರೆ.

ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಖಲಿಸ್ತಾನಿ ಉಗ್ರಗಾಮಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು, ಇತರೆ ದೇಶಗಳು ಮತ್ತು ಭಾರತಕ್ಕೆ ಬೆದರಿಕೆ ಹಾಕುವ ಉಗ್ರಗಾಮಿ ಗುಂಪುಗಳನ್ನು ಬ್ರಿಟನ್ ಸಹಿಸುವುದಿಲ್ಲ. ನಾವು ಉಗ್ರಗಾಮಿ ವಿರೋಧಿ ಕಾರ್ಯಪಡೆಯನ್ನು ಸ್ಥಾಪಿಸಿದ್ದೇವೆ. ಹಸ್ತಾಂತರ ಪ್ರಕರಣಗಳ ವಿಷಯದಲ್ಲಿ, ಕಾನೂನು ತಾಂತ್ರಿಕತೆಗಳು ಕಷ್ಟಕರವಾಗಿಸಿದೆ. ನಮ್ಮ ದೃಷ್ಟಿಕೋನದಿಂದ, ಅವರು ಹಿಂತಿರುಗಬೇಕೆಂದು ನಾವು ಬಯಸುತ್ತೇವೆ. ನಮ್ಮ ಕಾನೂನು ವ್ಯವಸ್ಥೆಯನ್ನು ಬಳಸಿಕೊಂಡು ಕಾನೂನಿನಿಂದ ತಪ್ಪಿಸಿಕೊಳ್ಳಲು ಬಯಸುವ ಜನರನ್ನು ನಾವು ಎಂದಿಗೂ ಸ್ವಾಗತಿಸುವುದಿಲ್ಲ ಎಂದು ಜಾನ್ಸನ್ ಅವರು ಹೇಳಿದ್ದಾರೆ.

ತಮ್ಮ ದ್ವಿಪಕ್ಷೀಯ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬೋರಿಸ್ ಜಾನ್ಸನ್ ಅವರು ಖಲಿಸ್ತಾನಿ ಗುಂಪುಗಳು ಮತ್ತು ಭಾರತದ ವಾಟೆಂಡ್ ಆರ್ಥಿಕ ಅಪರಾಧಿಗಳ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ. ಈ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಉಭಯ ದೇಶಗಳು ಹೇಳಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...