Monday, June 15, 2026
Monday, June 15, 2026

ದೆಹಲಿಯಲ್ಲಿ ಕೋವಿಡ್ ಆರ್ ವ್ಯಾಲ್ಯೂ 2ಕ್ಕಿಂತ ಹೆಚ್ಚು ದಾಖಲೆಯಾಗಿದೆ

Date:

ದೆಹಲಿಯಲ್ಲಿ ಸತತ 2ನೇ ವಾರವೂ ಆರ್‌- ವ್ಯಾಲ್ಯೂ (ಒಬ್ಬರಿಂದ ಎಷ್ಟು ಜನರಿಗೆ ಕೊರೋನಾ ಸೋಂಕು ಹರಡುತ್ತಿದೆ ಎಂದು ತಿಳಿಯಲು ಬಳಸುವ ಮಾನದಂಡ )2ಕ್ಕಿಂತ ಹೆಚ್ಚು ದಾಖಲಾಗಿದೆ ಎಂದು ಐಐಟಿ ಮದ್ರಾಸ್‌ನ ತಜ್ಞರ ತಂಡ ಮಾಹಿತಿ ನೀಡಿದೆ.

ದೇಶದಲ್ಲೇ ಅತಿ ಹೆಚ್ಚು ಕೇಸು ದಾಖಲಾಗುತ್ತಿರುವ ದೆಹಲಿಯಲ್ಲಿ ಕಳೆದ ವಾರ 2.12ರಷ್ಟುಆರ್‌- ವ್ಯಾಲ್ಯೂ ದಾಖಲಾಗಿತ್ತು. ಇದೀಗ ಏ.18-23 ವಾರದಲ್ಲೂ ಆರ್‌ ವ್ಯಾಲ್ಯೂ 2.1ರಷ್ಟಿದೆ. ಅಂದರೆ ಒಬ್ಬ ಸೋಂಕಿತನಿಂದ 2.1 ಜನರಿಗೆ ಸೋಂಕು ಹಬ್ಬುತ್ತಿದೆ ಎಂದು ತಜ್ಞರ ತಂಡ ತಿಳಿಸಿದೆ.

ಆರ್‌ ವ್ಯಾಲ್ಯೂ 1ಕ್ಕಿಂತ ಕಡಿಮೆ ಇದ್ದರೆ ಸಾಂಕ್ರಾಮಿಕ ಮುಕ್ತಾಯದ ಹಂತದತ್ತ ಸಾಗುತ್ತಿದೆ ಎಂದು ಪರಿಗಣಿಸಲಾಗುತ್ತದೆ.

ಆದರೆ, ದೆಹಲಿಯಲ್ಲಿ ಕಳೆದ 3 ತಿಂಗಳಲ್ಲೇ ಮೊದಲ ಬಾರಿಗೆ, ಕಳೆದ ವಾರ ಆರ್‌ ವ್ಯಾಲ್ಯೂ ಶೇ.1ರ ಗಡಿ ದಾಟುವ ಮೂಲಕ ಆತಂಕ ಹುಟ್ಟುಹಾಕಿತ್ತು. ಇದೀಗ ಸತತ 2ನೇ ವಾರ ಕೂಡಾ ಹರಡುವಿಕೆ ಪ್ರಮಾಣ ಹೆಚ್ಚು ಕಡಿಮೆ ಅದೇ ಮಟ್ಟದಲ್ಲಿ ಇರುವ ಕಾರಣ, ಮುಂದಿನ ವಾರಗಳಲ್ಲಿ ಸೋಂಕಿತರ ಪ್ರಮಾಣ ಮತ್ತಷ್ಟುಹೆಚ್ಚುವ ಆತಂಕ ಎದುರಾಗಿದೆ.

ದೆಹಲಿಯಲ್ಲಿ ಸೋಂಕು ಉಲ್ಬಣಕ್ಕೆ ಕಾರಣವಾದ ಒಮಿಕ್ರೋನ್‌ನ 2 ಹೊಸ ಉಪತಳಿಗಳು ಬೆಂಗಳೂರಿನಲ್ಲೂ ಪತ್ತೆಯಾಗಿವೆ. ಬೆಂಗಳೂರಿನ ಮೂಲದ ಇಬ್ಬರು ಸೋಂಕಿತರಲ್ಲಿ ಬಿಎ.2 ವಿಭಾಗಕ್ಕೆ ಸೇರುವ ಬಿಎ.2.10 ಮತ್ತು ಬಿಎ.2.12 ಎಂಬ ಓಮಿಕ್ರಾನ್ ಉಪತಳಿಗಳು ದೃಢಪಟ್ಟಿವೆ ಎಂದು ತಿಳಿದು ಬಂದಿದೆ.

ಆದರೆ, ಎರಡೂ ಉಪತಳಿಗಳ ಪತ್ತೆಯನ್ನು ಆರೋಗ್ಯ ಇಲಾಖೆ ಅಧಿಕೃತವಾಗಿ ಖಚಿತಪಡಿಸಿಲ್ಲ. ಈ ನಡುವೆ, ರಾಜ್ಯದಲ್ಲಿ ಸದ್ಯದಲ್ಲೇ 4ನೇ ಅಲೆ ಏಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಖಾಸಗಿ ಪ್ರಯೋಗಾಲಯದ ಮೂಲಗಳ ಪ್ರಕಾರ ಬಿಎ.2 ವಿಭಾಗಕ್ಕೆ ಸೇರಿದ ಒಮಿಕ್ರೋನ್‌ನ ಎರಡು ಹೊಸ ಉಪತಳಿಗಳು ರಾಜ್ಯದಲ್ಲಿ ಕಾಣಿಸಿಕೊಂಡಿವೆ. ಬೆಂಗಳೂರಿನ ಖಾಸಗಿ ಪ್ರಯೋಗಾಲಯ ನಡೆಸಿರುವ ವಂಶವಾಹಿ ಪರೀಕ್ಷೆಯಲ್ಲಿ ಉಪತಳಿಗಳು ಪತ್ತೆಯಾಗಿದೆ. ಇಬ್ಬರೂ ಸೋಂಕಿತರು ಬೆಂಗಳೂರಿನ ಮೂಲದವರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...