Sunday, August 23, 2026
Sunday, August 23, 2026

ಉಕ್ರೇನ್ ಯುದ್ಧ ಸನ್ನಿವೇಶದಲ್ಲಿ ಜನರಿಗೆ ಆಹಾರದ ಅಭಾವ

Date:

ರಷ್ಯಾ ಸೇನೆ ಬಹುತೇಕ ವಶಕ್ಕೆ ಪಡೆದುಕೊಂಡಿರುವ ಬಂದರು ನಗರ ಮರಿಯುಪೋಲ್‌ನಲ್ಲಿ ಉಳಿದಿರುವ ಉಕ್ರೇನ್‌ನ ಕೊನೆಯ ತುಕಡಿಯನ್ನು ಹೊರಹಾಕುವ ಉದ್ದೇಶದಿಂದ ಇಲ್ಲಿನ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಪಡೆಗಳು ವಾಯುದಾಳಿ ನಡೆಸಿವೆ ಎಂದು ತಿಳಿದುಬಂದಿದೆ.

ರಷ್ಯಾದ ಉಕ್ಕು ಕಾರ್ಖಾನೆಯಲ್ಲಿ ವಶಪಡಿಸಿಕೊಳ್ಳಲು ಸುಮಾರು 2000 ಯೋಧರು ಹೋರಾಟ ನಡೆಸುತ್ತಿದ್ದಾರೆ.

ಅತಿ ದೂರಕ್ಕೆ ದಾಳಿ ಮಾಡಬಲ್ಲ ವಿಮಾನಗಳನ್ನುಬಳಸಿ ರಷ್ಯಾ ದಾಳಿ ನಡೆಸುತ್ತಿದೆ. ಮರಿಯುಪೋಲ್‌ನಲ್ಲಿ ಉಳಿದಿರುವ ಜನರಿಗೆ ಆಹಾರದ ಅಭಾವ ಎದುರಾಗಿದೆ. ಇದೇ ವೇಳೆ ರಾಜಧಾನಿ ಕೀವ್‌ನಿಂದ ತನ್ನ ಸೇನೆಯನ್ನು ಹಿಂಪಡೆಯುತ್ತಿರುವ ರಷ್ಯಾ ಉಳಿದ ನಗರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ.

ರಷ್ಯಾ-ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿರುವ ನಡುವೆಯೇ, ಅಮೆರಿಕದ ವಿದೇಶಾಂಗ ಸಚಿವ ಆಯಂಟನಿ ಬ್ಲಿಂಕನ್‌ ಮತ್ತು ರಕ್ಷಣಾ ಕಾರ‍್ಯದರ್ಶಿ ಲಾಯ್ಡ್‌ ಆಸ್ಟಿನ್‌ ಅವರು ಶೀಘ್ರದಲ್ಲೇ ಉಕ್ರೇನಿಗೆ ಭೇಟಿ ನೀಡಲಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ತಿಳಿಸಿದ್ದಾರೆ.

ಆದರೆ ಅಮೆರಿಕ ಅಧ್ಯಕ್ಷರ ನಿವಾಸ ಶ್ವೇತಭವನ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ರಷ್ಯಾ-ಉಕ್ರೇನ್‌ ನಡುವೆ ಕಳೆದ 60 ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದ್ದು ಸಾವಿರಾರು ಮಂದಿ ರಷ್ಯಾದ ಕ್ರೌರ‍್ಯಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುದ್ಧ ಆರಂಭವಾದಾಗಿನಿಂದಲೂ ಬಂದರು ನಗರ ಮಾರಿಯುಪೋಲ್‌ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಲೇ ಇದೆ.

ಖೇರ್ಸನ್‌ನಲ್ಲಿ ನಿರ್ಮಿಸಲಾಗಿದ್ದ ರಷ್ಯಾದ ಸೇನಾ ಕಮಾಂಡ್‌ ನೆಲೆಯನ್ನು ನಾಶ ಮಾಡಿರುವುದಾಗಿ ಉಕ್ರೇನ್‌ ಸೇನೆ ಹೇಳಿದೆ. ಶುಕ್ರವಾರ ಈ ದಾಳಿ ನಡೆಸಲಾಗಿದ್ದು, ಇಬ್ಬರು ಸೇನಾ ಜನರಲ್‌ಗಳು ಹತರಾಗಿದ್ದಾರೆ.
ಈ ಕಮಾಂಡ್‌ನಲ್ಲಿ 50ಕ್ಕೂ ಹೆಚ್ಚು ರಷ್ಯಾ ಸೇನೆಯ ಹಿರಿಯ ಅಧಿಕಾರಿಗಳಿದ್ದರು ಎಂದು ಉಕ್ರೇನ್‌ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...