Sunday, August 23, 2026
Sunday, August 23, 2026

ಶಿವಮೊಗ್ಗ ಏರ್ ಪೋರ್ಟಿಗೆ ನನ್ನ ಹೆಸರು ಬೇಡ- ಬಿಎಸ್ ವೈ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು.

ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿ.
ಎಂ ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಮುಂದುವರೆದು, ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೆ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...