Thursday, March 26, 2026
Thursday, March 26, 2026

ಮಲೇರಿಯ ಜಾಗೃತಿ ವೈದ್ಯಕೀಯ ಕಾಲೇಜುಗಳಿಂದಲೂ ಆಗಬೇಕು- ಸುಧಾಕರ್

Date:

ಮನುಕುಲಕ್ಕೆ ಶಾಪವಾಗಿರುವ ಮಲೇರಿಯಾ ವಿರುದ್ಧ ಸರ್ಕಾರ ವಿವಿಧ ರೀತಿಯಲ್ಲಿ ಹೋರಾಟ ಮಾಡುತ್ತಿದೆ. ಕೇಂದ್ರ ಸರ್ಕಾರ 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ 2027ರ ಹೊತ್ತಿಗೆ ಮಲೇರಿಯಾ ನಿರ್ಮೂಲನೆ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕರೆ ಕೊಟ್ಟಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಂಎಸ್ ಎಸ್ ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯಯುಕ್ತ ಕರ್ನಾಟಕದ ಕನಸು ನನಸಾಗಬಹುದು ಎಂದು ಹೇಳಿದರು.

ಏಪ್ರಿಲ್ 25ನ್ನು ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ಜಾಥಾಗಳ ಮೂಲಕ ನಡೆಯುತ್ತಿದೆ. ಪ್ರತಿಯೊಂದು ತಾಲೂಕುಗಳಲ್ಲೂ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ವಿಭಿನ್ನವಾಗಿ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಸ್ವಚ್ಛತೆಯ ಮಹತ್ವನ್ನು ಸಾರ್ವಜನಿಕರಿಗೆ ತಿಳಿಸುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ವಿಶ್ವ ಮಲೇರಿಯಾ ದಿನವನ್ನು ಆರಂಭದಲ್ಲಿ ಆಫ್ರಿಕಾ ಮಲೇರಿಯಾ ದಿನ ಎಂದು ಆಚರಣೆ ಮಾಡಲಾಗುತ್ತಿತ್ತು. ಬಿಸಿಲಿರುವ ಪ್ರದೇಶಗಳಲ್ಲಿ ಮಲೇರಿಯಾ ಹೆಚ್ಚಾಗಿತ್ತು. ಹೀಗಾಗಿ ಆಫ್ರಿಕಾ ದೇಶಗಳಲ್ಲಿ, ಏಷ್ಯಾಖಂಡದಲ್ಲಿ ಮಲೇರಿಯಾ ಸೋಂಕು ಹೆಚ್ಚಿದೆ. ಅಮೆರಿಕಾದಲ್ಲಿ ಪ್ರವಾಸಿಗರಿಂದಾಗಿ ಅಪರೂಪಕ್ಕೆ ಮಲೇರಿಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಐರೋಪ್ಯ ದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಅತೀ ಕಡಿಮೆ ಪ್ರಮಾಣದಲ್ಲಿ ದಾಖಲಾಗುತ್ತವೆ. ಏಷ್ಯಾ ಖಂಡದಲ್ಲಿ ಮಲೇರಿಯಾದಿಂದಾಗುವ ಸಾವುಗಳ ಪೈಕಿ ಅತೀ ಹೆಚ್ಚು ಸಾವು ಭಾರತದಲ್ಲೇ ಆಗುತ್ತದೆ. ಇದು ಗಂಭೀರ ವಿಚಾರ ಎಂದು ಹೇಳಿದರು.

ಭಾರತದಲ್ಲಿ 2030ರ ಒಳಗೆ ಮಲೇರಿಯಾ ನಿರ್ಮೂಲನೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಂಕಲ್ಪ ತೊಟ್ಟಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸರ್ಕಾರ ಮತ್ತು ಸಮಾಜ ಒಟ್ಟಾಗಿ ಪ್ರತಿರೋಧ ಒಡ್ಡಿದರೆ ಮಾತ್ರ ಯಶಸ್ಸು ಸಿಗುತ್ತದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು. ಎಲ್ಲಾ ಹಳ್ಳಿಗಳಲ್ಳೂ ಆಶಾ ಕಾರ್ಯಕರ್ತರು ಶುಚಿತ್ವ ಮತ್ತು ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವೈದ್ಯಕೀಯ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಬಳಸಿಕೊಂಡು ಆಯಾ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕ ಆರೋಗ್ಯ ಕಾಪಾಡುವ ಕೆಲಸ ಕೇವಲ ಆರೋಗ್ಯ ಇಲಾಖೆಯ ಕೆಲಸ ಮಾತ್ರವಲ್ಲ. ವೈದ್ಯಕಿಯ ಶಿಕ್ಷಣ ನೀಡುವ ವೈದ್ಯಕೀಯ ಕಾಲೇಜುಗಳು ಕೂಡ ಮಾಡಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...