Tuesday, December 16, 2025
Tuesday, December 16, 2025

ಬೆಂಗಳೂರನ್ನ ಜಾಗತಿಕ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ- ಸಿಎಂ

Date:

ಬೆಂಗಳೂರು ಟೆಕ್ ಸಮ್ಮಿಟ್ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್‌ನನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ಟೆಕ್ ಸಮ್ಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂತರ ಮಾಧ್ಯಮದವರೊಂದಿಗೆ ಈ ಮಾಹಿತಿಯನ್ನು ಹಂಚಿಕೊಂಡರು.

ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದರು.

ನವೆಂಬರ್‌ 16ರಿಂದ 18ರವರಿಗೆ ಮೂರು ದಿನಗಳ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜಿಸಿರುವ ಪ್ರಯುಕ್ತ ವಿವಿಧ ವಲಯದ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಲವಾರು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಕೈಗಾರಿಕೆಗಳಿಗೆ ಪೂರಕವಾದ ನೀತಿಗಳು, ಎಕೋಸಿಸ್ಟಂ ಮೂಲಸೌಕರ್ಯ, ತಾಂತ್ರಿಕತೆಗಳ ಬಗ್ಗೆ ಬಹಳಷ್ಟು ಸಲಹೆಗಳನ್ನು ಕೈಗಾರಿಕೋದ್ಯಮಿಗಳು ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗ’ದ 25ನೇ ಆವೃತ್ತಿಯನ್ನು ನವೆಂಬರ್ 16, 17 ಮತ್ತು 18ರಂದು ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರವು ಅಗಾಧ ನೆರವು ನೀಡುತ್ತಿದೆ. ಪ್ರಧಾನಿ ಮೋದಿ ಅವರು ಘೋಷಿಸಿರುವ 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಗೆ ಕರ್ನಾಟಕವು 1.5 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಇಟ್ಟುಕೊಂಡಿದೆ ಎಂದು ಅವರು ನುಡಿದರು.

ಈ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೌತಿಕ ರೂಪದಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ (ಬಿಟಿಎಸ್) ಈಗಾಗಲೇ ತಯಾರಿ ಆರಂಭವಾಗಿದೆ. ಇದಕ್ಕೆ ಪೂರಕವಾಗಿ ಅಮೆರಿಕ, ಇಂಗ್ಲೆಂಡ್, ಜಪಾನ್ ಮುಂತಾದೆಡೆಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇತ್ತೀಚೆಗೆ ಕರ್ನಾಟಕ ಡೇಟಾ ಸೆಂಟರ್ ನೀತಿ-2022’ನ್ನು ಕೂಡ ಜಾರಿಗೆ ತರಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ 10 ಸಾವಿರ ಕೋಟಿ ರೂ. ಬಂಡವಾಳವನ್ನು ಸೆಳೆಯಲಾಗುವುದು ಎಂದು ಸಚಿವರು ವಿವರಿಸಿದರು.

ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಮೈಸೂರಿನಲ್ಲಿ ಸೈಬರ್ ಸೆಕ್ಯುರಿಟಿಗೆ, ಹುಬ್ಬಳ್ಳಿಯಲ್ಲಿ ಇಎಸ್ ಡಿಎಂ ಮತ್ತು ಕೃತಕ ಬುದ್ಧಿಮತ್ತೆ ಆಧರಿತ ಉದ್ದಿಮೆಗಳಿಗೆ, ಮಂಗಳೂರಿನಲ್ಲಿ ಫಿನ್-ಟೆಕ್ ವಲಯಕ್ಕೆ ಮತ್ತು ಬೆಳಗಾವಿಯಲ್ಲಿ ಏರೋಸ್ಪೇಸ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇವೆಲ್ಲವೂ ಸುಗಮವಾಗಿ ನಡೆಯಬೇಕೆಂಬ ಉದ್ದೇಶದಿಂದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್’ ಸ್ಥಾಪಿಸಲಾಗಿದೆ ಎಂದು ಸಚಿವರು ಹೇಳಿದರು.

ರಾಜ್ಯ ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ವಿದ್ಯುನ್ಮಾನ ಹಾಗೂ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಇಲಾಖೆಯ ನಿರ್ದೇಶಕಿ ಸಿ.ಎನ್.ಮೀನಾ ನಾಗರಾಜ್, ಜೈವಿಕ ತಂತ್ರಜ್ಞಾನ ಉದ್ಯಮಗಳ ಒಕ್ಕೂಟ(ಏಬಲ್)ದ ಅಧ್ಯಕ್ಷ ಜಿ.ಎಸ್. ಕೃಷ್ಣನ್, ಭಾರತೀಯ ಸಾಫ್ಟ್ವೇರ್ ಪಾರ್ಕ್ ಗಳ ಅಧ್ಯಕ್ಷ ಶೈಲೇಂದ್ರಕುಮಾರ್ ತ್ಯಾಗಿ, ಜಗದೀಶ್ ಪಟಣ್ಕರ್ ಉಪಸ್ಥಿತರಿದ್ದರು.

ಬಿ.ಟಿ. ವಿಷನ್ ಗ್ರೂಪ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು ವರ್ಚುವಲ್ ನಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...