Saturday, May 16, 2026
Saturday, May 16, 2026

ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ಪಾಸ್ ನೀಡಲು ಆದೇಶ

Date:

ಇದುವರೆಗೆ ಬೆಂಗಳೂರು ನಗರದ ಕಟ್ಟಡ ಕಾರ್ಮಿಕರಿಗೆ ಮಾತ್ರವೇ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ವಿತರಣೆಯನ್ನು ಕಟ್ಟಡ ಕಾರ್ಮಿಕರಿಗೆ ನೀಡಲಾಗುತ್ತಿತ್ತು. ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸೋದಾಗಿ ಕಳೆದ ಬಜೆಟ್ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು.

ಅದರಂತೆ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡುವಂತೆ ಯೋಜನೆಯನ್ನು ಅನುಷ್ಠಾನಕ್ಕಾಗಿ ಸರ್ಕಾರ ಆದೇಶ ಹೊರಡಿಸಿದೆ.

ಈ ಯೋಜನೆ ಜಾರಿ ಸಂದರ್ಭದಲ್ಲಿ ಕೆಟಿಟಿಪಿ ಕಾಯಿದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯೋಜನೆ ಜಾರಿಗೊಳಿಸುವ ವೆಚ್ಚವನ್ನು ಮಂಡಳಿ ನಿಧಿಯಿಂದ ಭರಿಸಬೇಕು. 10 ಕೋಟಿ ರೂಗಿಂತ ಹೆಚ್ಚಾದಲ್ಲಿ ಸಚಿವ ಸಂಪುಟ ಸಭೆಯಿಂದ ಅನುಮೋದನೆ ಪಡೆಯಬೇಕು ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯು ಕಾರ್ಮಿಕರ ಕಲ್ಯಾಣ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ರಾಜ್ಯಾದ್ಯಂತ ಬಸ್ ಪಾಸ್ ಯೋಜನೆಯನ್ನು ಎಲ್ಲಾ ಕಟ್ಟಡ ಕಾರ್ಮಿಕರಿಗೆ ವಿಸ್ತರಿಸಲು ಆರ್ಥಿಕ ಇಲಾಖೆಯು ಏಪ್ರಿಲ್ 16ರಂದು ಅನುಮೋದನೆ ನೀಡಿದೆ. ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲೂ ಕಟ್ಟಡ ಕಾರ್ಮಿಕರು ಪ್ರಯಾಣಿಸಲು ರಿಯಾಯಿತಿ ದರದ ಬಸ್ ಪಾಸ್ ನೀಡಬಹುದು.

ಇದಕ್ಕಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅನುದಾನ ಇಟ್ಟಿರದ ಕಾರಣ, ಕಾರ್ಮಿಕ ಕಲ್ಯಾಣ ಮಂಡಳಿಯ ಅನುದಾನವನ್ನೇ ಬಳಸಿಕೊಂಡು,ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...