Monday, December 15, 2025
Monday, December 15, 2025

ರಾಜ್ಯದಲ್ಲಿ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಘಟಕ ಸ್ಥಾಪನೆಯಾಗಲಿದೆ

Date:

ಕರ್ನಾಟಕ ಶೀಘ್ರದಲ್ಲೇ ವಿಶ್ವದ ಅತಿದೊಡ್ಡ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಉತ್ಪಾದನಾ ಘಟಕದ ತವರಾಗಲಿದೆ ಎಂದು EV ತಯಾರಕ ಒಮೆಗಾ ಸೀಕಿ ಮೊಬಿಲಿಟಿ ಸಂಸ್ಥೆ ತಿಳಿಸಿದೆ.

ಸಂಘಟಿತ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಹಣಕಾಸು ವರ್ಷದಲ್ಲಿ 200 ಪ್ರತಿಶತದಷ್ಟು ಬೃಹತ್ ಪ್ರಮಾಣದಲ್ಲಿ ಬೆಳೆದಿದೆ ಎಂದು OSM ಅಧ್ಯಕ್ಷ ಮತ್ತು ಸಂಸ್ಥಾಪಕ ಉದಯ್ ನಾರಂಗ್ ಅಭಿಪ್ರಾಯಪಟ್ಟಿದ್ದಾರೆ.

250 ಎಕರೆ ಭೂಮಿಯಲ್ಲಿ‌, 250 ಮಿಲಿಯನ್ ಡಾಲರ್ ಹೂಡಿಕೆಯೊಂದಿಗೆ ಅತಿದೊಡ್ಡ ಉತ್ಪಾದನಾ ಘಟಕ ಸ್ಥಾಪನೆಯಾಗಲಿದೆ. ಸುಮಾರು 10 ಲಕ್ಷ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ. ಮೂರು ಹಂತಗಳಲ್ಲಿ ನಿರ್ಮಾಣವಾಗಲಿರುವ ಘಟಕದಲ್ಲಿ Rage+, Rage+ rapid EV, Rage+ Frost, Rage+Swap and Rage+Tipper ಹಾಗೂ ಒಎಸ್‌ಎಂ ಅನ್ನು ಪರಿಚಯಿಸಲಿದ್ದಾರೆ ಎಂದು ತಿಳಿದುಬಂದಿದೆ.

1 ಮಿಲಿಯನ್ ಯೂನಿಟ್‌ಗಳ ಸಾಮರ್ಥ್ಯ ಹೊಂದಿರುವ ಘಟಕ ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ. ಈ ಘಟಕವು ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಜಾಗತಿಕ ನಾಯಕನಾಗುವ ಗುರಿಯತ್ತ ಇದು ಮೊದಲ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಕರ್ನಾಟಕವು ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮೂರನೇ ಅತಿದೊಡ್ಡ ಮಾರುಕಟ್ಟೆಯಾಗಿದೆ, EV ಬಳಕೆ ಇತ್ತೀಚೆಗೆ 1 ಲಕ್ಷ ಮೈಲಿಗಲ್ಲನ್ನು ದಾಟಿದೆ ಎಂದು ವರದಿಯಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪ್ರಕಾರ, ಕರ್ನಾಟಕವು ಏಪ್ರಿಲ್ 15 ರವರೆಗೆ 100,432 ಇವಿಗಳನ್ನು ನೊಂದಾಯಿಸಿದೆ‌.

ಮೊದಲ ಸ್ಥಾನದಲ್ಲಿ ಉತ್ತರ ಪ್ರದೇಶ (3 ಲಕ್ಷ ಇವಿ) ಮತ್ತು ದೆಹಲಿ (1.4 ಲಕ್ಷ) ವಾಹನಗಳನ್ನು ಹೊಂದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...