Thursday, July 9, 2026
Thursday, July 9, 2026

ರಾಜ್ಯ ಸಂಪುಟ ವಿಸ್ತರಣೆ‌ ಹಲವು ಲೆಕ್ಕಾಚಾರದಲ್ಲಿ ಸಿಎಂ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಹಲವು ಬಾರಿ ಪ್ರಯಾಣ ನಡೆಸಿದ್ದಾರೆ. ರಾಜ್ಯದಲ್ಲಿ ಎಲೆಕ್ಷನ್​ ಕ್ಯಾಬಿನೆಟ್​ ರಚನೆಯಾಗುತ್ತದೆ ಎಂಬ ನಿರೀಕ್ಷೆ ಮಾತ್ರ ಹಾಗೆ ಇದೆ. ಕಳೆದ ಬಾರಿ ಸರಿಯಾಗಿ ಸಿದ್ಧತೆ ಮಾಡಿಕೊಳ್ಳದೆ ವರಿಷ್ಠರ ಭೇಟಿಯಾಗಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈಗ ಸಂಪೂರ್ಣ ಸಿದ್ಧರಾಗಿ ಏಪ್ರಿಲ್​ 29ಕ್ಕೆ ದೆಹಲಿ ಪತ್ತೆ ಪ್ರಯಾಣ ಮಾಡಲಿದ್ದಾರೆ.

ಈ ಭೇಟಿಯಲ್ಲಿ ಮುಖ್ಯಮಂತ್ರಿಗಳು ಏನೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ? ಎಂಬುವುದರ ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ.

ರಾಜ್ಯದಲ್ಲಿ ಸದ್ಯದಲ್ಲೇ ಎಲೆಕ್ಷನ್​ ಕ್ಯಾಬಿನೆಟ್​ ರಚನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅದಕ್ಕಾಗಿಯೇ ಸಿದ್ಧರಾಗಿದ್ದಾರೆ. ವರಿಷ್ಠರನ್ನ ಭೇಟಿಯಾಗಲು ಇದೇ ಏಪ್ರಿಲ್​ 29ಕ್ಕೆ ದೆಹಲಿಗೆ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಈ ಭಾರೀ ಸಿಎಂ 3 ವಿಷಯ,ನೂರು ಲೆಕ್ಕಾಚಾರ ಹಾಕಿಕೊಂಡು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ.

ಮೂರು ಪ್ರತ್ಯೇಕ ವಿಷಯಗಳನ್ನು ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಹಾಗಾದ್ರೆ, ಆ ಪತ್ತಿಗಳೆನ್ನು ಎಂಬುವುದಕ್ಕೆ ಉತ್ತರ ಇಲ್ಲಿದೆ.

ಮೊದಲಿಗೆ ಸಂಪುಟ ವಿಸ್ತರಣೆ ಬಗ್ಗೆ ಕೆಲವು ಹೆಸರುಗಳನ್ನ ಪ್ರಸ್ತಾಪಿಸಲಿದ್ದಾರೆ. ಮೊದಲೇ ಖಾಲಿಯಿರುವ 4 ಮತ್ತೆ ಈಶ್ವರಪ್ಪ ರಾಜೀನಾಮೆಯಿಂದ ತೆರವಾಗಿರೋ 1 ಸ್ಥಾನ ಸೇರಿ ಸದ್ಯ ಖಾಲಿಯಿರುವ 5 ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಇನ್ನೂ ಎರಡನೇಯದಾಗಿ ಬಹಳ ವಿಭಿನ್ನವಾದ ಆಯ್ಕೆಯ ಪ್ರಕ್ರಿಯೆತನ್ನು ಸಿಎಂ ವರಿಷ್ಟರ ಮುಂದಿಡಲಿದ್ದಾರೆ. ಕ್ಯಾಬಿನೆಟ್‌ನಲ್ಲಿನ ಎಲ್ಲಾ ಸಚಿವರನ್ನು ಹೊರಗೆ ಕಳುಹಿಸಿ, ಚುನಾವಣೆಗೆ ಮುನ್ನ ಸಂಪೂರ್ಣ ನೂತನ ಸಂಪುಟ ರಚನೆ ಕುರಿತು ಚರ್ಚಿಸಲಿದ್ದಾರೆ.

ಖಾಲಿಯಿರುವ 5 ಸಚಿವ ಸ್ಥಾನ ಭರ್ತಿ ಜೊತೆಗೆ 6 ರಿಂದ 8 ಸಚಿವರಿಗೆ ಕೊಕ್​​ ಕೊಟ್ಟು ಮತ್ತೆ ರಚನೆ ಮಾಡುವ ಬಗ್ಗೆ ಸಿಎಂ ಚಿಂತನೆ ನಡೆಸಿದ್ದಾರೆ. ಈ 3ವಿಷಯಗಳನ್ನು ಚರ್ಚೆ ಮಾಡಲು ಸಿಎಂ ನಿರ್ಧರಿಸಿದ್ದಾರೆ.

ಒಟ್ಟಿನಲ್ಲಿ ಕಳೆದ ಬಾರೀ ಸಂಪುಟ ಭರ್ತಿಗೆ ವರಿಷ್ಠರು ಅಸ್ತು ಎಂದಿರಲಿಲ್ಲ. ಆದ್ದರಿಂದ ಈ ಭಾರೀ ಸಿಎಂ ಬೊಮ್ಮಾಯಿ 3 ಪಟ್ಟಿಯೊಂದಿಗೆ ಸಿಎಂ ದೆಹಲಿ ಯಾತ್ರೆ ಆರಂಭಿಸಲಿದ್ದಾರೆ. ಯಾವ ಪಟ್ಟಿಗೆ ಹೈಕಮಾಂಡ್​ ಅಸ್ತು ಅನ್ನುತ್ತೆ ಅನ್ನೋದೇ ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...