Saturday, May 16, 2026
Saturday, May 16, 2026

ರಾಜ್ಯ ಸಂಪುಟ ವಿಸ್ತರಣೆ‌ ಹಲವು ಲೆಕ್ಕಾಚಾರದಲ್ಲಿ ಸಿಎಂ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಹಲವು ಬಾರಿ ಪ್ರಯಾಣ ನಡೆಸಿದ್ದಾರೆ. ರಾಜ್ಯದಲ್ಲಿ ಎಲೆಕ್ಷನ್​ ಕ್ಯಾಬಿನೆಟ್​ ರಚನೆಯಾಗುತ್ತದೆ ಎಂಬ ನಿರೀಕ್ಷೆ ಮಾತ್ರ ಹಾಗೆ ಇದೆ. ಕಳೆದ ಬಾರಿ ಸರಿಯಾಗಿ ಸಿದ್ಧತೆ ಮಾಡಿಕೊಳ್ಳದೆ ವರಿಷ್ಠರ ಭೇಟಿಯಾಗಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈಗ ಸಂಪೂರ್ಣ ಸಿದ್ಧರಾಗಿ ಏಪ್ರಿಲ್​ 29ಕ್ಕೆ ದೆಹಲಿ ಪತ್ತೆ ಪ್ರಯಾಣ ಮಾಡಲಿದ್ದಾರೆ.

ಈ ಭೇಟಿಯಲ್ಲಿ ಮುಖ್ಯಮಂತ್ರಿಗಳು ಏನೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ? ಎಂಬುವುದರ ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ.

ರಾಜ್ಯದಲ್ಲಿ ಸದ್ಯದಲ್ಲೇ ಎಲೆಕ್ಷನ್​ ಕ್ಯಾಬಿನೆಟ್​ ರಚನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅದಕ್ಕಾಗಿಯೇ ಸಿದ್ಧರಾಗಿದ್ದಾರೆ. ವರಿಷ್ಠರನ್ನ ಭೇಟಿಯಾಗಲು ಇದೇ ಏಪ್ರಿಲ್​ 29ಕ್ಕೆ ದೆಹಲಿಗೆ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಈ ಭಾರೀ ಸಿಎಂ 3 ವಿಷಯ,ನೂರು ಲೆಕ್ಕಾಚಾರ ಹಾಕಿಕೊಂಡು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ.

ಮೂರು ಪ್ರತ್ಯೇಕ ವಿಷಯಗಳನ್ನು ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಹಾಗಾದ್ರೆ, ಆ ಪತ್ತಿಗಳೆನ್ನು ಎಂಬುವುದಕ್ಕೆ ಉತ್ತರ ಇಲ್ಲಿದೆ.

ಮೊದಲಿಗೆ ಸಂಪುಟ ವಿಸ್ತರಣೆ ಬಗ್ಗೆ ಕೆಲವು ಹೆಸರುಗಳನ್ನ ಪ್ರಸ್ತಾಪಿಸಲಿದ್ದಾರೆ. ಮೊದಲೇ ಖಾಲಿಯಿರುವ 4 ಮತ್ತೆ ಈಶ್ವರಪ್ಪ ರಾಜೀನಾಮೆಯಿಂದ ತೆರವಾಗಿರೋ 1 ಸ್ಥಾನ ಸೇರಿ ಸದ್ಯ ಖಾಲಿಯಿರುವ 5 ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಇನ್ನೂ ಎರಡನೇಯದಾಗಿ ಬಹಳ ವಿಭಿನ್ನವಾದ ಆಯ್ಕೆಯ ಪ್ರಕ್ರಿಯೆತನ್ನು ಸಿಎಂ ವರಿಷ್ಟರ ಮುಂದಿಡಲಿದ್ದಾರೆ. ಕ್ಯಾಬಿನೆಟ್‌ನಲ್ಲಿನ ಎಲ್ಲಾ ಸಚಿವರನ್ನು ಹೊರಗೆ ಕಳುಹಿಸಿ, ಚುನಾವಣೆಗೆ ಮುನ್ನ ಸಂಪೂರ್ಣ ನೂತನ ಸಂಪುಟ ರಚನೆ ಕುರಿತು ಚರ್ಚಿಸಲಿದ್ದಾರೆ.

ಖಾಲಿಯಿರುವ 5 ಸಚಿವ ಸ್ಥಾನ ಭರ್ತಿ ಜೊತೆಗೆ 6 ರಿಂದ 8 ಸಚಿವರಿಗೆ ಕೊಕ್​​ ಕೊಟ್ಟು ಮತ್ತೆ ರಚನೆ ಮಾಡುವ ಬಗ್ಗೆ ಸಿಎಂ ಚಿಂತನೆ ನಡೆಸಿದ್ದಾರೆ. ಈ 3ವಿಷಯಗಳನ್ನು ಚರ್ಚೆ ಮಾಡಲು ಸಿಎಂ ನಿರ್ಧರಿಸಿದ್ದಾರೆ.

ಒಟ್ಟಿನಲ್ಲಿ ಕಳೆದ ಬಾರೀ ಸಂಪುಟ ಭರ್ತಿಗೆ ವರಿಷ್ಠರು ಅಸ್ತು ಎಂದಿರಲಿಲ್ಲ. ಆದ್ದರಿಂದ ಈ ಭಾರೀ ಸಿಎಂ ಬೊಮ್ಮಾಯಿ 3 ಪಟ್ಟಿಯೊಂದಿಗೆ ಸಿಎಂ ದೆಹಲಿ ಯಾತ್ರೆ ಆರಂಭಿಸಲಿದ್ದಾರೆ. ಯಾವ ಪಟ್ಟಿಗೆ ಹೈಕಮಾಂಡ್​ ಅಸ್ತು ಅನ್ನುತ್ತೆ ಅನ್ನೋದೇ ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...