Friday, March 27, 2026
Friday, March 27, 2026

ಎಸ್ ಸಿ,ಎಸ್ ಟಿಯವರಿಗೆ ಮನೆ-ನಿವೇಶನ ನೀಡಲು ಮಾಹಿತಿ ಸಂಗ್ರಹ

Date:

ರಾಜ್ಯ ಸರ್ಕಾರವು ಮನೆ ಅಥವಾ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂತೋಷದ ವಿಚಾರವನ್ನು ನೀಡಿದೆ.

ಪರಿಶಿಷ್ಟ ಜಾತಿ ಸಮುದಾಯದ ಪಟ್ಟಿಮಾಡಿ ತ್ವರಿತವಾಗಿ ನಿವೇಶನ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ 4 ವಿಭಾಗಗಳ ಒಂದೊಂದು ಜಿಲ್ಲೆಯನ್ನು ಮಾದರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಿನ್ನೆ (ಸೋಮವಾರ) ನಡೆದ ಸಭೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ.
ರಾಜ್ಯಾದ್ಯಂತ ಮನೆ ಅಥವಾ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳಿಗೆ ಮನೆ ಅಥವಾ ನಿವೇಶನಗಳನ್ನು ನೀಡಲು ಆರಂಭಿಕವಾಗಿ 4 ವಿಭಾಗಗಳಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವ 4 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 5.46 ಲಕ್ಷ ಕುಟುಂಬಗಳು ಮನೆ ಹೊಂದಿಲ್ಲ. ಅವರಿಗೆ ಭೂಮಿ ಕೊಡುವುದು ಸರ್ಕಾರದ ಜವಾಬ್ದಾರಿ. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆದ್ಯತೆಯಲ್ಲಿ ಶೀಘ್ರವೇ ಮನೆ ನೀಡಲು ಆಯ್ದ ಜಿಲ್ಲೆಗಳಲ್ಲಿ ಸರ್ಕಾರಿ ಭೂಮಿ ಲಭ್ಯತೆ, ವಸತಿ ರಹಿತ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...