ಪಾಕಿಸ್ತಾನ ತನ್ನ ಹಳೆಯ ಚಾಳಿಯನ್ನು ಇನ್ನೂ ಬಿಟ್ಟಿಲ್ಲ. ಅಧಿಕಾರ ಸ್ವೀಕರಿಸಿ ಕೇವಲ 15 ದಿನಗಳಷ್ಟೇ ಕಳೆದಿರುವ ನೂತನ ಪಾಕಿಸ್ತಾನದ ಪ್ರಧಾನಿ ಶೆಹ್ಬಾಝ್ ಷರೀಫ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ಭೇಟಿಯನ್ನು ಆಕ್ಷೇಪಿಸಿ ಟ್ವೀಟ್ ಮಾಡಿದ್ದಾರೆ.
ಅಧಿಕಾರ ಸ್ವೀಕರಿಸುವ ಮೊದಲಿನಿಂದಲೂ ಅವರು ಕಾಶ್ಮೀರ ವಿಷಯವೇ ಭಾರತ ಮತ್ತು ಪಾಕಿಸ್ತಾನಗಳ ನಡುವಣ ಶಾಂತಿಗೆ ಇರುವ ತಡೆ ಎಂದು ಪ್ರತಿಪಾದಿಸುತ್ತಿದ್ದರು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಭಾನುವಾರ ಕಾಶ್ಮೀರ ಕಣಿವೆಗೆ ಭೇಟಿ ನೀಡಿ ಸುಮಾರು 20,000 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಪತ್ರ ವಿನಿಮಯ ಮಾಡಿಕೊಂಡಿದ್ದಾರೆ. ದ್ವಿಪಕ್ಷೀಯ ಮಾತುಕತೆ ಮತ್ತು ವ್ಯಾಪಾರ ಒಪ್ಪಂದದ ಬಗ್ಗೆ ಅವರು ಈ ಪತ್ರಗಳಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ. ಶಹಬಾಝ್ ಷರೀಫ್ ಹೇಳಿಕೆಗೆ ಭಾರತ ಸರ್ಕಾರ ಈವರೆಗೆ ಪ್ರತಿಕ್ರಿಯಿಸಿಲ್ಲ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕಾಶ್ಮೀರ ಭೇಟಿ ಮತ್ತು ವಿವಿಧ ಜಲವಿದ್ಯುತ್ ಸ್ಥಾವರಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾಮಗಾರಿಗಳು ಸಿಂಧು ನದಿ ಒಪ್ಪಂದದ ಆಶಯವನ್ನು ಉಲ್ಲಂಘಿಸಿವೆ. ಇದು ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿದೆ, ಸಾಮಾನ್ಯ ಸ್ಥಿತಿ ನೆಲೆಗೊಂಡಿದೆ ಎಂದು ಬಿಂಬಿಸುವ ಭಾರತದ ಹತಾಶ ಪ್ರಯತ್ನ ಎಂದು ಟ್ವೀಟ್ ಮಾಡಿದ್ದಾರೆ.