Friday, March 27, 2026
Friday, March 27, 2026

ಜಿಎಸ್ ಟಿ ಕಾನೂನಿನ ಅರಿವಿದ್ದಲ್ಲಿ ಸಮಸ್ಯೆ ಇರದು- ನವೀನ್ ಕುಮಾರ್

Date:

ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಟೆರೋ ಕ್ಯಾಸ್ಟ್ ಸಭಾಂಗಣದಲ್ಲಿ ಹೌ ಟು ಫೇಸ್ ಜಿಎಸ್ಟಿ ಇನ್ವೆಸ್ಟಿಗೇಶನ್ ಅಂಡ್ ಆಡಿಟ್ ಪ್ರಾಕ್ಟಿಕಲ್ ಟಿಪ್ಸ್ ಈ ವಿಷಯ ಕುರಿತು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬೆಂಗಳೂರಿನ ಹೆಸರಾಂತ ಕಾನೂನು ಸಲಹೆಗಾರ ಕೆಎಸ್ ನವೀನ್ ಕುಮಾರ್ ಅವರು ಕಾರ್ಯಗಾರವನ್ನು ಉದ್ಘಾಟಿಸಿದರು. ಅನಂತರದಲ್ಲಿ ಮಾತನಾಡಿದ ಅವರು, ಜಿಎಸ್ಟಿ ಕಾನೂನಿನ ಅರಿವಿದ್ದಲ್ಲಿ ಉದ್ದಿಮೆದಾರರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಇರುವುದಿಲ್ಲ. ಕಾನೂನಿನ ಅಡಿಯಲ್ಲಿ ಸಮನ್ಸ್ ಬಂದಾಗ ಯಾರು ಜಾರಿ ಮಾಡಿರಬೇಕು, ಯಾರಿಗೆ ಜಾರಿ ಮಾಡಿರಬೇಕು, ಮತ್ತು ಯಾರು ಅದನ್ನು ಹಾಜರಾಗಿ ಪ್ರತಿನಿಧಿಸಬೇಕು, ಹೇಗೆ ಪ್ರತಿನಿಧಿಸಬೇಕು, ಅದನ್ನು ಪ್ರತಿನಿಧಿಸುತ್ತಿದ್ದರೆ ಉದ್ದಿಮೆಗಳಿಗೆ ಆಗುವ ತೊಂದರೆಗಳೇನು ಎಂಬುದರ ಬಗ್ಗೆ ವಿವರಿಸಿದರು.

ಜೆಸ್ಸಿ ಕಾನೂನಿನ ಅಡಿಯಲ್ಲಿ ಅಧಿಕಾರಿಗಳು ವ್ಯವಹಾರದ ಸ್ಥಳಗಳ ಪರಿಶೀಲನೆ ಸಮಯದಲ್ಲಿ ಅಧಿಕಾರದ ದುರುಪಯೋಗವಾಗದಂತೆ ವ್ಯಾಪಾರಸ್ಥರು ಯಾವ ರೀತಿಯಲ್ಲಿ ಪ್ರತಿನಿಧಿಸಬೇಕು. ಯಾವ ದಾಖಲೆಗಳನ್ನು ಒದಗಿಸಬೇಕು ಹೀಗೆ ಮುಂತಾದ ವಿವರವಾದ ಸಲಹೆಗಳನ್ನು ಉದ್ಯಮಿಗಳಿಗೆ ನೀಡಿದರು.

ತೆರಿಗೆ ಇಲಾಖೆ ಅಧಿಕಾರಿಗಳು ಪರಿವೀಕ್ಷಣೆಯ ಸಮಯದಲ್ಲಿ, ಬರವಣಿಗೆ ರೂಪದಲ್ಲಿ ತೆಗೆದುಕೊಳ್ಳುವ ಉದ್ಯಮಿಗಳ ಹೇಳಿಕೆಗಳನ್ನು ಒತ್ತಾಯಿಸಿ ತೆಗೆದುಕೊಂಡ ಸಂದರ್ಭಗಳಲ್ಲಿ, ಉದ್ಯೋಗಿಗಳು ತಾವು ಕೊಟ್ಟ ಹೇಳಿಕೆಗಳನ್ನು ಯಾವರೀತಿಯಲ್ಲಿ ಹಿಂಪಡೆದು ಸಮಂಜಸವಾದ ಹೇಳಿಕೆಗಳನ್ನು ಕೊಡಬೇಕೆಂದು ತಿಳಿಸಿದರು.

ಸಂಘದ ಅಧ್ಯಕ್ಷ ಎನ್ ಗೋಪಿನಾಥ್ ಅಧ್ಯಕ್ಷತೆಯನ್ನು ವಹಿಸಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉದ್ದಿಮೆದಾರರು ಹಲವಾರು ತೆರಿಗೆ ಸಂಬಂಧಿತ ತೊಂದರೆಗಳನ್ನು ಅನುಭವಿಸುತ್ತಿದ್ದು, ಕಾನೂನಿನ ಮಾಹಿತಿಯ ಕೊರತೆಯಿದೆ. ಇಂತಹ ಉತ್ತಮ ಕಾರ್ಯಗಾರಗಳನ್ನು ನಡೆಸಿದಾಗ ಮಾಹಿತಿಯನ್ನು ಪಡೆದು ತಮ್ಮ ಉದ್ದಿಮೆಗಳನ್ನು ಧೈರ್ಯದಿಂದ ಮುನ್ನಡೆಸಿಕೊಂಡು ಹೋಗಬಹುದು ಎಂದು ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಚಾರ್ಟೆಡ್ ಅಕೌಂಟೆಂಟ್ ನಾಗರಾಜ್ ಸಿಂಗ್ ಸ್ವಾಗತಿಸಿ, ತೆರಿಗೆ ಸಲಹಾ ಸಮಿತಿ ಚೇರ್ಮನ್ ಇ. ಪರಮೇಶ್ವರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಂ.ರಾಜು ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ, ವಸಂತ ಹೋಬಳಿದಾರ್ ನಿರೂಪಿಸಿದರು. ಸಹಕಾರ್ಯದರ್ಶಿ ಜೆ ವಿಜಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಖಜಾಂಚಿ ಮಧುಸೂದನ್ ಐತಾಳ್, ಮಾಜಿ ಅಧ್ಯಕ್ಷರಾದ ಡಿ.ಎಂ.ಶಂಕರಪ್ಪ, ನಿರ್ದೇಶಕರಾದ ಬಿ.ಆರ್. ಸಂತೋಷ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್...