Wednesday, March 19, 2025
Wednesday, March 19, 2025

ಒಂದು ವರ್ಷದ ಅವಧಿಗೆ 27,000 ಅತಿಥಿ ಶಿಕ್ಷಕರ ನೇಮಕ- ನಾಗೇಶ್

Date:

ಸರ್ಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು ಮುಂದಾಗಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ 27,000 ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲು ನಿರ್ಧರಿಸಿದೆ.

ಈ ವರ್ಷ ಶಾಲೆ ಆರಂಭವಾಗುವ ಹೊತ್ತಿಗೆ ನೇಮಕ ಮಾಡಿಕೊಳ್ಳಲು ತೀರ್ವನಿಸಿದೆ. ಶೀಘ್ರ ಪ್ರಕ್ರಿಯೆ ಆರಂಭವಾಗಲಿದೆ.ಅತಿಥಿ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ದೊರೆತಿದೆ. ಇದರ ಜೊತೆಗೆ ಇನ್ನೂ 3 ಸಾವಿರ ಶಿಕ್ಷಕರನ್ನು ಹೆಚ್ಚುವರಿಯಾಗಿ ನೇಮಿಸಿಕೊಳ್ಳಲು ಪ್ರಸ್ತಾವನೆ ಕಳುಹಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತರೆ ಒಟ್ಟು 30 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕ್ರಿಯೆ ಆರಂಭಿಸಲಿದೆ. ಈಗಾಗಲೇ 15 ಸಾವಿರ ಶಿಕ್ಷಕರ ಕಾಯಂ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ.

ಇದಕ್ಕೆ ಅರ್ಜಿ ಸಲ್ಲಿಸಲು ಏ.25 ಕೊನೆಯ ದಿನವಾಗಿತ್ತು. ಮೇ 21 ಮತ್ತು 22ರಂದು ಪರೀಕ್ಷೆ ನಡೆಯಲಿದೆ. ನೇಮಕಾತಿ ಪೂರ್ಣಗೊಂಡು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ವರ್ಷದ ಅವಧಿ ಬೇಕಾಗುತ್ತದೆ. ಅಲ್ಲಿಯವರೆಗೆ ಕೊರತೆ ನೀಗಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಸದ್ಯ ಸರ್ಕಾರ 4 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಇದರ ಭಾಗವಾಗಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಸರ್ಕಾರ ಬಜೆಟ್​ನಲ್ಲಿ ಘೋಷಣೆ ಮಾಡಿತ್ತು. ಅದರಂತೆ ಈಗ ಆರ್ಥಿಕ ಇಲಾಖೆ ಅನುಮೋದನೆ ಸಿಕ್ಕಿದೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿದ್ದಾರೆ. ಮೇ 16ಕ್ಕೆ ಶಾಲೆಗಳು ಆರಂಭವಾಗಲಿದೆ. ಮೊದಲ ದಿನವೇ ಅತಿಥಿ ಶಿಕ್ಷಕರು ಹಾಜರಾಗಲಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...