Thursday, July 9, 2026
Thursday, July 9, 2026

ರಷ್ಯಾಗೆ ಉಕ್ರೇನ್ ಯುದ್ಧ ಚ್ಯೂಯಿಂಗ್ ಗಮ್ ಆಗುತ್ತಿದೆಯೆ?

Date:

ಎರಡು ತಿಂಗಳಿನಿಂದ ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ, ಮರಿಯುಪೋಲ್‌ ಬಳಿಕ ಉಕ್ರೇನ್‌ನ ಮತ್ತೊಂದು ನಗರವನ್ನು ವಶಕ್ಕೆ ತೆಗೆದುಕೊಂಡಿದೆ. ಲುಕಾಂಕ್ಷ್ ವಲಯದಲ್ಲಿರುವ ಕ್ರೆಮಿನ್ನಾ ನಗರದಲ್ಲಿ ಹಲವು ದಿನಗಳ ಕಾಳಗದ ಬಳಿಕ ವಶಕ್ಕೆ ಪಡೆಯುವಲ್ಲಿ ರಷ್ಯಾ ಸಫಲವಾಗಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.

ಆದರೆ ಈ ಬಗ್ಗೆ ಉಕ್ರೇನ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಈ ಮಧ್ಯೆ, ಮೂರನೇ ಮಹಾಯುದ್ಧದ ಕುರಿತು ಉಕ್ರೇನ್‌ ಪ್ರಚೋದನೆ ನೀಡಬಾರದು. ಜತೆಗೆ ಅಣ್ವಸ್ತ್ರ ಬಿಕ್ಕಟ್ಟಿನ ಬೆದರಿಕೆಯನ್ನು ಉಕ್ರೇನ್‌ ಲಘುವಾಗಿ ಪರಿಗಣಿಸಬಾರದು ಎಂದು ರಷ್ಯಾದ ರಾಯಭಾರಿ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ರೈಲು ಹಾಗೂ ಇಂಧನ ಕೇಂದ್ರಗಳ ಮೇಲೆ ರಷ್ಯಾ ತನ್ನ ದಾಳಿಯನ್ನು ತೀವ್ರಗೊಳಿಸಿದೆ.
ರಷ್ಯಾ ಹೊಸದಾಗಿ ವಶಪಡಿಸಿಕೊಂಡಿರುವ ಕ್ರಿಮಿನ್ನಾ ಉಕ್ರೇನ್‌ ರಾಜಧಾನಿ ಕೀವ್‌ನಿಂದ 575 ಕಿ.ಮೀ. ದೂರದಲ್ಲಿದೆ.

ಉಕ್ರೇನ್‌ನ ಎರಡನೇ ಅತಿದೊಡ್ಡ ನಗರ ಖಾರ್ಕೀವ್‌ ಮೇಲೆ ರಷ್ಯಾದ ದಾಳಿ ಮುಂದುವರೆದಿದೆ.

ಉಕ್ರೇನ್‌ನ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ದಾಳಿ
ರಷ್ಯಾ ಸೇನೆ ಬಹುತೇಕ ವಶಕ್ಕೆ ಪಡೆದುಕೊಂಡಿರುವ ಬಂದರು ನಗರ ಮರಿಯುಪೋಲ್‌ನಲ್ಲಿ ಉಳಿದಿರುವ ಉಕ್ರೇನ್‌ನ ಕೊನೆಯ ತುಕಡಿಯನ್ನು ಹೊರಹಾಕುವ ಉದ್ದೇಶದಿಂದ ಇಲ್ಲಿನ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಪಡೆಗಳು ವಾಯುದಾಳಿ ನಡೆಸಿವೆ ಎಂದು ತಿಳಿದುಬಂದಿದೆ.

ಮರಿಯುಪೋಲ್‌ನಲ್ಲಿ ಉಳಿದಿರುವ ಜನರಿಗೆ ಆಹಾರದ ಅಭಾವ ಎದುರಾಗಿದೆ. ಇದೇ ವೇಳೆ ರಾಜಧಾನಿ ಕೀವ್‌ನಿಂದ ತನ್ನ ಸೇನೆಯನ್ನು ಹಿಂಪಡೆಯುತ್ತಿರುವ ರಷ್ಯಾ ಉಳಿದ ನಗರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ

ರಷ್ಯಾದ ಉಕ್ಕು ಕಾರ್ಖಾನೆಯಲ್ಲಿ ವಶಪಡಿಸಿಕೊಳ್ಳಲು ಸುಮಾರು 2000 ಯೋಧರು ಹೋರಾಟ ನಡೆಸುತ್ತಿದ್ದಾರೆ. ಅತಿ ದೂರಕ್ಕೆ ದಾಳಿ ಮಾಡಬಲ್ಲ ವಿಮಾನಗಳನ್ನುಬಳಸಿ ರಷ್ಯಾ ದಾಳಿ ನಡೆಸುತ್ತಿದೆ.

ಯುದ್ಧ ಆರಂಭವಾದಾಗಿನಿಂದಲೂ ಬಂದರು ನಗರ ಮಾರಿಯುಪೋಲ್‌ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಲೇ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....