Tuesday, December 16, 2025
Tuesday, December 16, 2025

ರಾಯಲ್ಸ್ ಗೆ ಗೆಲುವು ರಾಯಲ್ ಗೆ ಸೋಲು

Date:

ರಾಯಲ್ ಚಾಲೆಂಜರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಭರ್ಜರಿ ಜಯ.

ಬ್ಯಾಟಿಂಗ್ನಲ್ಲಿ ಮುಗ್ಗರಿಸಿದ ಆರ್ಸಿಬಿ ರಾಜಸ್ಥಾನ್ ರಾಯಲ್ಸ್ 29 ರನ್ ಗಳ ಜಯ
ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿಯು ಬ್ಯಾಟಿಂಗ್ನಲ್ಲಿ ಸಂಪೂರ್ಣ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 15ನೇ ಆವೃತ್ತಿಯ 39ನೇ ಪಂದ್ಯದಲ್ಲಿ ನೇತೃತ್ವದ ರಾಜಸ್ಥಾನ್ ರಾಯಲ್ಸ್ 29ರನ್ ಗಳಿಂದ ಶರಣಾಯಿತು.

ಎಂಸಿಎ ಕ್ರೀಡಾಂಗಣದಲ್ಲಿ ಮಂಗಳವಾರ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡು ಸಂಜು ಸ್ಯಾಮ್ಸನ್ ಬಳಗವನ್ನು 144 ರನ್ ಗಳಿಗೆ ಕಟ್ಟಿ ಹಾಕಿದ ಡುಪ್ಲೆಸಿಸ್ ಬಳಗ, ರಾಯಲ್ ಬೌಲರ್ ಗಳ ದಾಳಿಗೆ ತತ್ತರಿಸಿ 19. 3 ಓವರ್ ಗಳಲ್ಲಿ 115 ರನ್ ಗಳಿಗೆ ಸರ್ವ ಪತನಗೊಂಡಿತು. ಇದು ಬೆಂಗಳೂರು ತಂಡಕ್ಕೆ 9 ಪಂದ್ಯಗಳಲ್ಲಿ 4ನೇ ಸೋಲು. ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದ ರಾಯಲ್ಸ್ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3 ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ಜಿಗಿದರೆ, ಆರ್ಸಿಬಿ 5ನೇ ಸ್ಥಾನದಲ್ಲಿ ಉಳಿದುಕೊಂಡಿತು.
ಆರ್ಸಿಬಿ ಪರ ನಾಯಕ ಡುಪ್ಲೆಸಿಸ್ (23), ರಜಿತ್ ಪಾಟಿದಾರ್ (16), ಶಹಬಾಜ್ ಅಹಮದ್ (17) ಮತ್ತು ಹಸರಂಗ (18) ಮಾತ್ರ ಎರಡಂಕಿ ಮೊತ್ತ ಗಳಿಸಿದರು. ರಾಜಸ್ಥಾನ ತಂಡದ ಪರ ಅರ್ಧಶತಕ ಬಾರಿಸಿದ್ದ ಪರಾಗ್. ಕೊನೆಯಲ್ಲಿ ನಾಲ್ಕು ಕ್ಯಾಚ್ ಪಡೆದು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಮುಳುವಾದರು.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನಾಯಕ ಡುಪ್ಲೆಸಿಸ್ ಅವರ ನಿರ್ಧಾರವನ್ನು ಸಮರ್ಥಿಸಲೂ ಎಂಬಂತೆ ಆರ್ಸಿಬಿ ವೇಗಿಗಳಾದ ಮಹಮ್ಮದ್ ಸಿರಾಜ್ (30 ಕ್ಕೆ2) ಮತ್ತು ಹೆಂಜಲ್ ವುಡ್ (19ಕ್ಕೆ2) ಹಾಗೂ ಸ್ಪಿನ್ನರ್ ಹಸರಂಗ (23ಕ್ಕೆ 2) ರಾಜಸ್ಥಾನ್ ಬ್ಯಾಟ್ಸ್ಮನ್ಗಳ ಮೇಲೆ ಮುಗಿಬಿದ್ದರು. ತಂಡ 10 ಎಸೆತಗಳಲ್ಲಿ 11 ರನ್ ಗಳಿಸುವಷ್ಟರಲ್ಲಿ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಔಟ್ ಆದರು. ಅಲ್ಲಿಂದಲೇ ಶುರುವಾಗಿದ್ದು ರಾಯಲ್ಸ್ ಬಳಗದ ಪೆವಿಲಿಯನ್ ಪಥಸಂಚಲನ. ತಂಡದ ಮೊತ್ತ 33 ರನ್ ತಲುಪುವಷ್ಟರಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ಬಟ್ಲರ್ ಕೂಡ ಪೆವಿಲಿಯನ್ ಗೆ ಸೇರಿಕೊಂಡರು. ಪಡಿಕಲ್ ಮತ್ತು ಅಶ್ವಿನ್ ವಿಕೆಟ್ ಮಹಮ್ಮದ್ ಸಿರಾಜ್ ಪಾಲಾದರೆ, ಜೋಸ್ ಗೆ ಪೆವಿಲಿಯನ್ ಹಾದಿ ತೋರಿಸಿದ್ದು ಹೆಂಜಾಲ್ ವುಡ್. ಬಿಸಿರಕ್ತದ ತರುಣ ರಿಯಾನ್ ಪರಾಗ್ ಒಂದೆಡೆ ಕ್ರೀಸ್ ಹಚ್ಚಿಕೊಂಡಿದ್ದು ಹೊರತುಪಡಿಸಿದರೆ ಉಳಿದ ಆಟಗಾರರದ್ದು ಪುಟ್ಟ ಪುಟ್ಟ ಕತೆಯಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ...

Karnataka Public Service Commission ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಎಸಿಎಫ್ ಗಳಿಗೆ ನಿಷ್ಠೆ, ದಕ್ಷತಾ ಪ್ರಮಾಣ ವಚನ ಬೋಧನೆ

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿಗೊಂಡು...

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...