Monday, August 24, 2026
Monday, August 24, 2026

 ಚಹಾದಲ್ಲಿ ಹೋದ ಮಾನ ಚೂಡಾ ಕೊಟ್ಟರೂ ಬರದು

Date:

ದತ್ತಗುರುಗಳ ದರ್ಶನಕ್ಕೆ ಬಂದ ಕೇಂದ್ರ ಸಚಿವರಿಗೆ ಏನೂ ತೊಂದರೆಯಾಗಲಿಲ್ಲ. ಆದರೆ ಅವರು ಒಂದು ಕ್ಷಣ ವಿಮಾನ ನಿಲ್ದಾಣದ ವಿಶ್ರಾಂತಿಕೋಣೆಯಲ್ಲಿ ಚಹಾ ಕೇಳಿದಾಗ ಆಯಿತು.

ಎಂತಹ ಇರಿಸುಮುರುಸಿನ ಪ್ರಸಂಗ ನಡೆದುಬಿಟ್ಟಿತು. ಒಂದು ಸಲ ಚಹಾ ಸಿಗುತ್ತ ಅಂತ ಕೇಳಿದರು. ಸುಮ್ಮನಾದರು.ಪ್ರಯಾಣದ ಪ್ರಯಾಸ ಪರಿಹಾರಕ್ಕೆ ಅಗತ್ಯವಿತ್ತು. 

ಈಗ ಯಾರೇ ಒಬ್ಬ ಪುಢಾರಿ ಬಂದರೂ ಪ್ರವಾಸಿ ಮಂದಿರಗಳಲ್ಲಿ ಚಹಾಬಿಸ್ಕತ್ತು ರೆಡಿ ಇರುತ್ತದೆ. ಆದರೆ ಕೇಂದ್ರ ಕ್ಯಾಬಿನೆಟ್ ಸಚಿವರಿಗೆ ಇಲ್ಲ ಎಂದರೆ ಆದೀತೆ! ಎರಡು ಬಾರಿ ಕೇಳಿದರೂ ಚಹಾ ಬರಲೇ ಇಲ್ಲ!.

ಈ ಘಟನೆ ನಡೆದದ್ದು ಕಲಬುರ್ಗಿಯಲ್ಲಿ. ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ ಚಹಾ ಕೇಳಿದವರು. ಗಾಣಗಾಪುರದಲ್ಲಿ ಎಲ್ಲವೂ ಸುಗಮವಾಗಿತ್ತು. ಆದರೆ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ  ಮಾತ್ರ ಸಚಿವರು ಚಹಾ ಸಿಗದೇ ಚಡಪಡಿಸಿದರಂತೆ.

ಶಿಷ್ಟಾಚಾರದ ಪ್ರಕಾರ ಸಚಿವರಿಗೆ ಈ ಎಲ್ಲವೂ ಸಿದ್ಧವಾಗಿರಬೇಕು.

ಆಹಾರ ಸುರಕ್ಷತಾ ಅಧಿಕಾರಿಯ ಕರ್ತವ್ಯ ಅದು. ಇಲ್ಲಿ ಆದ ಪ್ರಮಾದವೆಂದರೆ ಅವರನ್ನೇ ಒಳಗಡೆ ಬಿಡದೆ ಭದ್ರತಾ ಅಧಿಕಾರಿಗಳು ಆಹಾರ ಸುರಕ್ಷತಾ ಸಿಬ್ಬಂದಿಯನ್ನ ಹೊರಗೆ ನಿಲ್ಲಿಸಿದ್ದರು. ಆದರೂ ಸಂಸದ  ಡಾ‌.ಉಮೇಶ್ ಜಾಧವ್ ಗೆ ಈ ವಿಷಯ ತಳಿಯಿತು.

ತಕ್ಷಣ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ್ ಅವರನ್ನ  ತರಾಟೆಗೆ ತೆಗೆದುಕೊಂಡರು.

” ಇನ್ ಟೈಮ್ಗೆ ಟೀ ಕೊಡದಿದ್ರೆ.ನಮ್ಮ ಕರ್ನಾಟಕದ ಮಂತ್ರಿಗಳು ಏನು ತಿಳಿದುಕೊಳ್ಳುತ್ತಾರೆ?  ಮುಂದೆ ಹೀಗಾಗದಂತೆ ಬೀ ಕೇರ್ ” ಅನ್ನುವ ರೀತಿಯಲ್ಲಿ ಹೇಳಿದರಂತೆ. 

ಕೊನೆಗೆ ವಿಮಾನ ನಿಲ್ದಾಣದ ಹೊರಗಡೆ ಕ್ಯಾಂಟೀನ್ ನಿಂದ ಚಹಾ ಬಂತು.

ಸದ್ಯ ಸಚಿವ ಗಡ್ಕರಿ ಅವರು ಬೆಂಗಳೂರು ಮಂತ್ರಿಗಳಿಗೆ ಫೋನ್ ಮಾಡಿ ರಾದ್ಧಾಂತ ಎಬ್ಬಿಸಲಿಲ್ಲ. ಅದಕ್ಕೇ ಕನ್ನಡದ ಗಾದೆ ಮಾತಿನ ರೀತಿ 

” ಚಹಾದಲ್ಲಿ ಹೋದ ಮಾನ ,ಚೂಡಾ ಕೊಟ್ಟರೂ ಬರದು !” ಅನ್ನೋಣವೆ?

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...