Thursday, July 9, 2026
Thursday, July 9, 2026

ಮುದ್ರಣ ಕಾಗದ ಬೆಲೆ ಏರಿದೆ.ಇಳಿಕೆ ಮಾಡಿ- ಸಿದ್ಧರಾಮಯ್ಯ

Date:

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕೋದ್ಯಮ. ಇದರಲ್ಲಿ ಪತ್ರಿಕಾ ಮಾಧ್ಯಮ ಬಹಳ ಮಹತ್ವ ಪಡೆದಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಪತ್ರಿಕಾರಂಗಕ್ಕೆ ಮುದ್ರಣ ಕಾಗದದ ಬೆಲೆ ಏರಿಕೆ ತೀವ್ರವಾಗಿ ಕಾಡುತ್ತಿದೆ.

ಮುದ್ರಣ ಮಾಧ್ಯಮ ನಿರಾತಂಕವಾಗಿ ಮುಂದುವರಿಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಪತ್ರಿಕಾ ಸಂಸ್ಥೆಗಳಿಗೆ ಸುಗಮ ಮತ್ತು ಸರಳವಾಗಿ ಮುದ್ರಣ ಕಾಗದ ಲಭ್ಯವಾಗುವಂತೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗೆ ಮನವಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಪತ್ರಿಕಾಲಯಗಳನ್ನು ಕಾಗದದ ಮೇಲೆ ನೀಡಬೇಕಿದ್ದ ತೆರಿಗೆ ಪ್ರಮಾಣ ಈಗ ಶೇ.68 ಆಗಿದೆ. ಜಿಎಸ್​ಟಿ ಜಾರಿಗೆ ಬರುವ ಮುನ್ನ ಒಟ್ಟಾರೆ ಶೇ.3 ಮಾತ್ರ ತೆರಿಗೆ ಇತ್ತು. ಸದ್ಯದ ಪರಿಸ್ಥಿತಿಯಿಂದ ಪತ್ರಿಕೆಗಳ ದರವನ್ನು ಹೆಚ್ಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರ ಜತೆಗೆ ಪೆಟ್ರೋಲ್​-ಡಿಸೇಲೆ ಬೆಲೆ ಏರಿಕೆ, ಕಚ್ಚಾ ಪದಾರ್ಥಗಳ ಕೊರತೆ, ಕೋವಿಡ್​ ಸೃಷ್ಟಿಸಿದ ಪರಿಣಾಮ… ಮುದ್ರಣ ಕಾಗದದ ಬೆಲೆ ದುಪ್ಪಟ್ಟು ಏರಿಕೆ ಆಗಿದೆ. ಪತ್ರಿಕೆಗಳಿಗೆ ಬರುತ್ತಿದ್ದ ಜಾಹೀರಾತು ಪ್ರಮಾಣವೂ ಕಡಿಮೆ ಆಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಪತ್ರಿಕೆಗಳನ್ನು ನಡೆಸುವುದೇ ದುಸ್ತರವಾಗಿದೆ.

ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ಜನರ ಧ್ವನಿಯಾಗಿ ಕೆಲಸ ಮಾಡುತ್ತಿರುವ ಪ್ರತಿಕೆಗಳಿಗೆ ಇದೀಗ ಮುದ್ರಣ ಕಾಗದದ ಸಮಸ್ಯೆ ಕಾಡುತ್ತಿದೆ. ಅಗತ್ಯ ಪ್ರಮಾಣದಲ್ಲಿ ಕಾಗದ ಲಭ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ನವರು ವಿವರಿಸಿದ್ದಾರೆ.

ಪೇಪರ್ ಪ್ರಿಂಟ್ ಮಾಡಲು ಬಹಳ ವೆಚ್ಚ ತಗಲುತ್ತಿದ್ದು, ಆದಾಯ ಕಡಿಮೆ ಆಗಿದೆ. ಪರಿಣಾಮ ನಷ್ಟ ಉಂಟಾಗಿ ಬಹುತೇಕ ಸಂಸ್ಥೆಗಳು ನಷ್ಟ ಅನುಭವಿಸುತ್ತಿವೆ. ದಯವಿಟ್ಟು ಕೆಲ ನೀತಿಗಳನ್ನು ಬದಲಾಯಿಸಿ ಪತ್ರಿಕಾ ಮಾಧ್ಯಮದ ಸಮಸ್ಯೆಗೆ ಧ್ವನಿಯಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...