Wednesday, December 17, 2025
Wednesday, December 17, 2025

ಒಂದು ಸಿಗರೇಟಿನಲ್ಲಿ 7 ಸಾವಿರ ರಾಸಾಯನಿಕ ವಸ್ತುಗಳಿವೆ

Date:

ತಂಬಾಕು ವ್ಯಸನದ ದುಷ್ಪರಿಣಾಮಗಳಿಂದಾಗಿ ಪ್ರಪಂಚದಾದ್ಯಂತ ಪ್ರತೀ 06 ಸೆಕೆಂಡ್‌ಗೆ ಒಬ್ಬರು ಸಾವನ್ನಪ್ಪುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ ಎಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಶಿವಮೊಗ್ಗ ಜಿಲ್ಲಾ ಸಲಹೆಗಾರರಾದ ಹೇಮಂತ್‌ರಾಜ್ ಅರಸ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯವು ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಂಬಾಕು ಮುಕ್ತ ವಿಶ್ವವಿದ್ಯಾಲಯ ಘೋಷಣಾ ಪೂರ್ವಕಾರ್ಯಕ್ರಮ ಮತ್ತು ಅರಿವುಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿಯೂ ತಂಬಾಕು ವ್ಯಸನದ ದುಷ್ಟರಿಣಾಮಗಳು ತೀವ್ರವಾಗಿವೆ. ದೇಶದ ಶೇ. 35ರಷ್ಟು ಜನಸಂಖ್ಯೆ ತಂಬಾಕು ಬಳಕೆ ಮಾಡುತ್ತಿದೆ. ಪ್ರತಿವರ್ಷ 10 ಲಕ್ಷಜನರು ತಂಬಾಕಿನಿಂದಾಗಿ ಬರುವ ಕ್ಯಾನ್ಸರ್, ಪಾರ್ಶ್ವವಾಯು, ಕ್ಷಯರೋಗ, ನ್ಯುಮೋನಿಯಾ, ಹೃದಯ ಸಂಬಂಧಿ ಖಾಯಿಲೆಗಳಿಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ ಎಂದರು.

ಸಿಗರೇಟನ್ನು 7 ಸಾವಿರ ರೀತಿಯ ವಿಷಯುಕ್ತ ರಾಸಾಯಿನಿಕ ವಸ್ತುಗಳನ್ನು ಬಳಸಿ ಉತ್ಪಾದಿಸಲಾಗುತ್ತದೆ. ನೇರವಾಗಿ ಸೇವನೆ ಮಾಡುವವರಿಗಲ್ಲದೇ, ಪಕ್ಕದಲ್ಲಿಇದ್ದಾಗ ಆಗುವ ಪರೋಕ್ಷ ಸೇವನೆಯು ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತದೆ. ಸ್ನೇಹಿತರು, ಸೆಲೆಬ್ರಿಟಿಗಳ ತಂಬಾಕು ಸೇವನೆ ಯುವಕರ ಮೇಲೆ ಅಗಾಧ ಪ್ರಭಾವ ಬೀರುತ್ತಿದೆ. ಯೋಗ, ಧ್ಯಾನ, ಉತ್ತಮ ಸ್ನೇಹ ವಲಯಗಳು, ಪೋಷಕರ ಕಾಳಜಿಯಿಂದ ತಂಬಾಕಿನಿಂದ ದೂರ ಉಳಿಯುವುದು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಹಿಂದೆ ಶ್ರೀಮಂತರು ತಮ್ಮ ವೈಭವಗಳನ್ನು ಪ್ರದರ್ಶಿಸಲು ತಂಬಾಕು ಬಳಕೆ ಹುಟ್ಟುಹಾಕಿದರು. ಇಂದು ಅದುವೇ ವ್ಯಸನವಾಗಿ ಪರಿವರ್ತನೆ ಹೊಂದಿ ಯುವಜನರ ಬದುಕನ್ನು ನಾಶಪಡಿಸುತ್ತಿದೆ. ದೇಶದ ಬೆಳವಣಗೆಗೆ ಅಡ್ಡಿಯಾಗುವ ಹಂತಕ್ಕೆ ಬೆಳೆದಿದೆ. ಈ ಕುರಿತುದೊಡ್ಡ ಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ವಿವಿ ಯು ಕೈಗೊಂಡಿದೆ. ಮತ್ತಷ್ಟು ಚುರುಕುಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್, ಆರೋಗ್ಯಾಧಿಕಾರಿಗಳು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...