Sunday, December 14, 2025
Sunday, December 14, 2025

ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳು ಇಂಧನ ದರ ಇಳಿಸಲಿ- ಡಿಕೆಶಿ

Date:

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.

ಪ್ರತಿ ಪೆಟ್ರೋಲ್‌ ಬಂಕ್‌ಗಳಲ್ಲೂ ಮೋದಿ ಅವರು ಸಿಲಿಂಡರ್‌ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್‌ಗಳ ಬೆಲೆ ಎಷ್ಟಿದೆ, ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ತಿಳಿಸಿದರು.

ಮೋದಿಯವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು ಎಂದರು.

ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್‌ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...