Saturday, February 7, 2026
Saturday, February 7, 2026

ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳು ಇಂಧನ ದರ ಇಳಿಸಲಿ- ಡಿಕೆಶಿ

Date:

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.

ಪ್ರತಿ ಪೆಟ್ರೋಲ್‌ ಬಂಕ್‌ಗಳಲ್ಲೂ ಮೋದಿ ಅವರು ಸಿಲಿಂಡರ್‌ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್‌ಗಳ ಬೆಲೆ ಎಷ್ಟಿದೆ, ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ತಿಳಿಸಿದರು.

ಮೋದಿಯವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು ಎಂದರು.

ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್‌ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...