Monday, August 24, 2026
Monday, August 24, 2026

ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳು ಇಂಧನ ದರ ಇಳಿಸಲಿ- ಡಿಕೆಶಿ

Date:

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.

ಪ್ರತಿ ಪೆಟ್ರೋಲ್‌ ಬಂಕ್‌ಗಳಲ್ಲೂ ಮೋದಿ ಅವರು ಸಿಲಿಂಡರ್‌ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್‌ಗಳ ಬೆಲೆ ಎಷ್ಟಿದೆ, ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ತಿಳಿಸಿದರು.

ಮೋದಿಯವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು ಎಂದರು.

ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್‌ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...