Monday, July 13, 2026
Monday, July 13, 2026

ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳು ಇಂಧನ ದರ ಇಳಿಸಲಿ- ಡಿಕೆಶಿ

Date:

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.

ಪ್ರತಿ ಪೆಟ್ರೋಲ್‌ ಬಂಕ್‌ಗಳಲ್ಲೂ ಮೋದಿ ಅವರು ಸಿಲಿಂಡರ್‌ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್‌ಗಳ ಬೆಲೆ ಎಷ್ಟಿದೆ, ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ತಿಳಿಸಿದರು.

ಮೋದಿಯವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು ಎಂದರು.

ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್‌ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...