Saturday, March 28, 2026
Saturday, March 28, 2026

ಮೇ 1 ರವರೆಗೆ ಮಳೆ ಸುರಿಯಲಿದೆ- ಹವಾಮಾನ ವರದಿ

Date:

ಮೇ 1ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ. ಇಂದಿನಿಂದ ಮೇ 1ರವರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 30ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.

ಇಂದು ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಡಿಕೇರಿ, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಕೊಪ್ಪ, ಹೊಸನಗರ, ಸಾಗರ, ತೀರ್ಥಹಳ್ಳಿಯ ಸುತ್ತಮುತ್ತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಗಡಿಯಲ್ಲೂ ಮಳೆಯಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ. 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...