Saturday, March 28, 2026
Saturday, March 28, 2026

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡದಿರಿ- ಓಮರ್ ಅಬ್ದುಲ್ಲ

Date:

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡುವ ಪ್ರಯತ್ನವನ್ನು ತಡೆಯಬೇಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿ.ಎಂ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಅವರು ತಿಳಿಸಿದರು.

ಶ್ರೀನಗರದಲ್ಲಿ ಪಕ್ಷದ ಯುವ ಮುಖಂಡರೊಂದಿಗೆ ಸಂವಾದದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನಮ್ಮ ಜೀವನ ಶೈಲಿಯೇ ನಿಮಗೆ ಸಮಸ್ಯೆಯಾಗಿದೆ ಯಾಕೆ? ಆಜಾನ್‌ಗಾಗಿ ಲೌಡ್‌ ಸ್ವೀಕರ್‌ ಬಳಸಬೇಡಿ ಎಂದು ಹೇಳುತ್ತಿರುವುದೇಕೆ? ನಾವು ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಬೇಡಿ ಎಂದೂ ಹೇಳಿಲ್ಲ. ಹಲಾಲ್‌ ಕಟ್‌ ಮಾಂಸ ಖರೀದಿಸಬೇಡಿ ಎಂದು ಹೇಳುತ್ತಿದ್ದೀರೇಕೆ? ಹಲಾಲ್‌ ಮಾಂಸ ತಿನ್ನುವಂತೆ ನಿಮ್ಮನ್ನು ಒತ್ತಾಯಪಡಿಸಿಲ್ಲ. ಮುಸ್ಲಿಂತೇರರಿಗೆ ಹಲಾಲ್‌ ಕಟ್‌ ಮಾಂಸ ತಿನ್ನುವಂತೆ ಒತ್ತಾಯಪಡಿಸಿದ ಯಾವುದಾದರೂ ಒಬ್ಬ ಮುಸ್ಲಿಮನನ್ನು ತೋರಿಸಿ ಎಂದು ಸವಾಲು ಹಾಕಿದರು.

ದೇಶದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪಾಲಿಸುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಸಂವಿಧಾನದಲ್ಲಿ ನಮ್ಮದು ಜಾತ್ಯತೀತ ದೇಶ ಎಂದು ಪ್ರತಿಪಾದಿಸಲಾಗಿದೆ. ಇದರ ಪ್ರಕಾರ ಎಲ್ಲ ಧರ್ಮಗಳು ಒಂದೇ. ಎಲ್ಲ ಧರ್ಮಗಳನ್ನು ಸಮಾನವಾಗಿ ಸ್ವೀಕರಿಸಿರುವ ಜಾತ್ಯತೀತ ಭಾರತವನ್ನು ಜಮ್ಮು -ಕಾಶ್ಮೀರ ಸೇರಿಕೊಂಡಿದೆ. ನಾವು ಒಪ್ಪಿಕೊಂಡ ದೇಶವಾಗಿ ಇಂದು ಭಾರತ ಉಳಿದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ನಿರ್ಬಂಧ ಹೇರಿ ವಿವಾದ ಎಬ್ಬಿಸಲಾಗಿದೆ.
ಧರ್ಮದ ವಿಚಾರದಲ್ಲಿ ಮೂಗು ತೂರಿಸುವ ಕೆಲಸವನ್ನು ಯಾವುದೇ ಸರ್ಕಾರಗಳು ಮಾಡಬಾರದು ಎಂದು ಸಲಹೆ ನೀಡಿದರು.

ಒಂದು ಧರ್ಮವು ಮತ್ತೊಂದು ಧರ್ಮಕ್ಕಿಂತ ಶ್ರೇಷ್ಠವೆಂದು ಪರಿಗಣಿಸುವುದಾಗಿ ನಮಗೆ ಹೇಳಿಲ್ಲ. ಒಂದು ವೇಳೆ ಹಾಗೆ ಹೇಳಿದ್ದರೆ ನಮ್ಮ ನಿರ್ಧಾರವೂ ಬೇರೆಯಾಗಿರುತ್ತಿತ್ತೇನೊ’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಬೇಸಿಗೆಯ ರಜೆ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿರುವುದು ಸ್ವಾಗತಾರ್ಹ.

ಮುಖ್ಯ ನ್ಯಾಯಮೂರ್ತಿಗಳು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...