Monday, December 15, 2025
Monday, December 15, 2025

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡದಿರಿ- ಓಮರ್ ಅಬ್ದುಲ್ಲ

Date:

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡುವ ಪ್ರಯತ್ನವನ್ನು ತಡೆಯಬೇಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿ.ಎಂ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಅವರು ತಿಳಿಸಿದರು.

ಶ್ರೀನಗರದಲ್ಲಿ ಪಕ್ಷದ ಯುವ ಮುಖಂಡರೊಂದಿಗೆ ಸಂವಾದದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನಮ್ಮ ಜೀವನ ಶೈಲಿಯೇ ನಿಮಗೆ ಸಮಸ್ಯೆಯಾಗಿದೆ ಯಾಕೆ? ಆಜಾನ್‌ಗಾಗಿ ಲೌಡ್‌ ಸ್ವೀಕರ್‌ ಬಳಸಬೇಡಿ ಎಂದು ಹೇಳುತ್ತಿರುವುದೇಕೆ? ನಾವು ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಬೇಡಿ ಎಂದೂ ಹೇಳಿಲ್ಲ. ಹಲಾಲ್‌ ಕಟ್‌ ಮಾಂಸ ಖರೀದಿಸಬೇಡಿ ಎಂದು ಹೇಳುತ್ತಿದ್ದೀರೇಕೆ? ಹಲಾಲ್‌ ಮಾಂಸ ತಿನ್ನುವಂತೆ ನಿಮ್ಮನ್ನು ಒತ್ತಾಯಪಡಿಸಿಲ್ಲ. ಮುಸ್ಲಿಂತೇರರಿಗೆ ಹಲಾಲ್‌ ಕಟ್‌ ಮಾಂಸ ತಿನ್ನುವಂತೆ ಒತ್ತಾಯಪಡಿಸಿದ ಯಾವುದಾದರೂ ಒಬ್ಬ ಮುಸ್ಲಿಮನನ್ನು ತೋರಿಸಿ ಎಂದು ಸವಾಲು ಹಾಕಿದರು.

ದೇಶದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪಾಲಿಸುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಸಂವಿಧಾನದಲ್ಲಿ ನಮ್ಮದು ಜಾತ್ಯತೀತ ದೇಶ ಎಂದು ಪ್ರತಿಪಾದಿಸಲಾಗಿದೆ. ಇದರ ಪ್ರಕಾರ ಎಲ್ಲ ಧರ್ಮಗಳು ಒಂದೇ. ಎಲ್ಲ ಧರ್ಮಗಳನ್ನು ಸಮಾನವಾಗಿ ಸ್ವೀಕರಿಸಿರುವ ಜಾತ್ಯತೀತ ಭಾರತವನ್ನು ಜಮ್ಮು -ಕಾಶ್ಮೀರ ಸೇರಿಕೊಂಡಿದೆ. ನಾವು ಒಪ್ಪಿಕೊಂಡ ದೇಶವಾಗಿ ಇಂದು ಭಾರತ ಉಳಿದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ನಿರ್ಬಂಧ ಹೇರಿ ವಿವಾದ ಎಬ್ಬಿಸಲಾಗಿದೆ.
ಧರ್ಮದ ವಿಚಾರದಲ್ಲಿ ಮೂಗು ತೂರಿಸುವ ಕೆಲಸವನ್ನು ಯಾವುದೇ ಸರ್ಕಾರಗಳು ಮಾಡಬಾರದು ಎಂದು ಸಲಹೆ ನೀಡಿದರು.

ಒಂದು ಧರ್ಮವು ಮತ್ತೊಂದು ಧರ್ಮಕ್ಕಿಂತ ಶ್ರೇಷ್ಠವೆಂದು ಪರಿಗಣಿಸುವುದಾಗಿ ನಮಗೆ ಹೇಳಿಲ್ಲ. ಒಂದು ವೇಳೆ ಹಾಗೆ ಹೇಳಿದ್ದರೆ ನಮ್ಮ ನಿರ್ಧಾರವೂ ಬೇರೆಯಾಗಿರುತ್ತಿತ್ತೇನೊ’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಬೇಸಿಗೆಯ ರಜೆ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿರುವುದು ಸ್ವಾಗತಾರ್ಹ.

ಮುಖ್ಯ ನ್ಯಾಯಮೂರ್ತಿಗಳು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...