Friday, February 6, 2026
Friday, February 6, 2026

ಕೇಂದ್ರವು ಇಂಧನದ ತೆರಿಗೆ ಇಳಿಸಲಿ ಬಳಿಕ ನಾವೂ ಇಳಿಸುತ್ತೇವೆ- ಉದ್ಧವ್

Date:

ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆಗೆ ಜವಾಬ್ದಾರಿ ಅಲ್ಲ. ನೀವು ಕೇಂದ್ರದಲ್ಲಿ ಮಾಡಿರುವ ತಪ್ಪಿಗೆ ನಮ್ಮನ್ನು ದೂಷಿಸಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಹೆಚ್ಚಿನ ತೆರಿಗೆ ಹಾಕಿಕೊಂಡು ಇದೀಗ ರಾಜ್ಯ ಸರ್ಕಾರಗಳ ಮೇಲೆ ಬೆರಳು ತೊರಿಸುತ್ತಿದೆ. ಮೊದಲು ಕೇಂದ್ರ ಇಂಧನಗಳ ತೆರಿಗೆಯನ್ನು ಇನ್ನಷ್ಟು ಕಡಿತಗೊಳಿಸಲಿ ಆ ಬಳಿಕ ರಾಜ್ಯಗಳಲ್ಲೂ ಕಡಿತಗೊಳಿಸಬಹುದು. ಮಹಾರಾಷ್ಟ್ರ 15% ಜಿಎಸ್‍ಟಿ ತೆರಿಗೆ ಸಂಗ್ರಹದ ಮೂಲಕ ಅತಿ ಹೆಚ್ಚಿನ ತೆರಿಗೆ ಸಂಗ್ರಹಿಸುವ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡರು.

ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು
ಕಡಿತಗೊಳಿಸುವಂತೆ ನರೇಂದ್ರ ಮೋದಿ ಬಿಜೆಪಿಯೇತರ ರಾಜ್ಯಗಳಿಗೆ ಮನವಿ ಮಾಡಿದ್ದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈನಲ್ಲಿ ಡೀಸೆಲ್ ಲೀ. 24.38 ರೂ. ಕೇಂದ್ರ ತೆರಿಗೆ ಮತ್ತು 22.37 ರೂ. ರಾಜ್ಯ ತೆರಿಗೆ. ಪೆಟ್ರೋಲ್ 31.58 ರೂ.
ಕೇಂದ್ರ ಮತ್ತು 32.55 ರೂ. ರಾಜ್ಯ ತೆರಿಗೆ. ಇದರಿಂದಾಗಿ ರಾಜ್ಯದಲ್ಲಿ ಇಂಧನ ದರ ಏರಿಕೆ ಕಂಡಿದೆ. ನಾವು ರಾಜ್ಯದಲ್ಲಿ ಈಗಾಗಲೇ ನ್ಯಾಚುರಲ್ ಗ್ಯಾಸ್ ಮೇಲಿನ ತೆರಿಗೆ ವಿನಾಯಿತಿ ನೀಡಿದ್ದೇವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...