Saturday, March 28, 2026
Saturday, March 28, 2026

ಎಚ್ ಆರ್ ಎಂಎಸ್ ಪದ್ಧತಿ ರದ್ದು ಪಡಿಸಲು ಪ್ರತಿಭಟನೆ

Date:

ರಾಜ್ಯ ಸರ್ಕಾರ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಳೆದ ಜನವರಿ ತಿಂಗಳಿನಿಂದ ಜಾರಿಗೆ ತಂದಿರುವ ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯನ್ನು ರದ್ಧುಪಡಿಸಬೇಕೆಂದು ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರು ಗುರುವಾರ ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ ಊಟದ ವೇಳೆಯಲ್ಲಿ ಅಧ್ಯಾಪಕೇತರ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿ ಕುಲಸಚಿವೆ ಜಿ. ಅನುರಾಧ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಲಸಚಿವೆ ಜಿ. ಅನುರಾಧ ಮಾತನಾಡಿ, ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿ ತಿಂಗಳ ಆರಂಭದಲ್ಲಿಯೇ ವೇತನ ಪಾವತಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಆಡಳಿತವು ನಿರಂತರ ಪ್ರಯತ್ನ ನಡೆಸುತ್ತಿದ್ದು, ಸಂಘದ ಮನವಿಯನ್ನು ಸರ್ಕಾರಕ್ಕೆ ತಲುಪಿಸಲಾಗುವುದು ಎಂದರು.

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸಿಬ್ಬಂದಿಯ ವೇತನ ಪಾವತಿಗೆ ಎಚ್‌ಆರ್‌ಎಂಎಸ್ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದ್ದು, ಪ್ರತಿ ತಿಂಗಳೂ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ನೌಕರರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ದುಸ್ತರವಾಗುತ್ತಿದೆ.

ಇದಲ್ಲದೆ ಬ್ಯಾಂಕ್‌ಗಳಲ್ಲಿ ವೇತನಾಧಾರಿತ ಸಾಲಸೌಲಭ್ಯ ಪಡೆದಿದ್ದು, ನಿಗದಿತ ಸಮಯಕ್ಕೆ ಕಂತು ಪಾವತಿಯಾಗದೆ ಸಾಲದ ಹೊರೆ ಹೆಚ್ಚಾಗುತ್ತಿದೆ ಎಂದು ಸಂಘ ಪತ್ರದಲ್ಲಿ ಅರಿಕೆ ಮಾಡಿಕೊಂಡಿದೆ.

ಎಚ್‌ಆರ್‌ಎಂಎಸ್ ಪದ್ಧತಿ ವಿಶ್ವವಿದ್ಯಾಲಯದ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತಿದೆ. ಇದು ವಿಶ್ವವಿದ್ಯಾಲಯ ಸ್ಥಾಪನೆಯ ಮೂಲ ಉದ್ದೇಶಕ್ಕೆ ಧಕ್ಕೆ ತರುತ್ತಿರುವುದಲ್ಲದೆ, ಶೈಕ್ಷಣ ಚಟುವಟಿಕೆಗಳಿಗೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ ವಿವಿಗಳಲ್ಲಿ ಹೊಸದಾಗಿ ಜಾರಿಗೆ ತಂದಿರುವ ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯನ್ನು ರದ್ಧುಪಡಿಸುವಂತೆ ಮನವಿ ಮಾಡಿಕೊಂಡಿದೆ.

ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಅಬ್ದುಲ್ ಅಲಿ ಮತ್ತಿತರ ಪದಾಧಿಕಾರಿಗಳು, ಅಧ್ಯಾಪಕೇತರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...