Monday, May 18, 2026
Monday, May 18, 2026

ಎಚ್ ಆರ್ ಎಂಎಸ್ ಪದ್ಧತಿ ರದ್ದು ಪಡಿಸಲು ಪ್ರತಿಭಟನೆ

Date:

ರಾಜ್ಯ ಸರ್ಕಾರ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಳೆದ ಜನವರಿ ತಿಂಗಳಿನಿಂದ ಜಾರಿಗೆ ತಂದಿರುವ ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯನ್ನು ರದ್ಧುಪಡಿಸಬೇಕೆಂದು ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರು ಗುರುವಾರ ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ ಊಟದ ವೇಳೆಯಲ್ಲಿ ಅಧ್ಯಾಪಕೇತರ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿ ಕುಲಸಚಿವೆ ಜಿ. ಅನುರಾಧ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಲಸಚಿವೆ ಜಿ. ಅನುರಾಧ ಮಾತನಾಡಿ, ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿ ತಿಂಗಳ ಆರಂಭದಲ್ಲಿಯೇ ವೇತನ ಪಾವತಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಆಡಳಿತವು ನಿರಂತರ ಪ್ರಯತ್ನ ನಡೆಸುತ್ತಿದ್ದು, ಸಂಘದ ಮನವಿಯನ್ನು ಸರ್ಕಾರಕ್ಕೆ ತಲುಪಿಸಲಾಗುವುದು ಎಂದರು.

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸಿಬ್ಬಂದಿಯ ವೇತನ ಪಾವತಿಗೆ ಎಚ್‌ಆರ್‌ಎಂಎಸ್ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದ್ದು, ಪ್ರತಿ ತಿಂಗಳೂ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ನೌಕರರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ದುಸ್ತರವಾಗುತ್ತಿದೆ.

ಇದಲ್ಲದೆ ಬ್ಯಾಂಕ್‌ಗಳಲ್ಲಿ ವೇತನಾಧಾರಿತ ಸಾಲಸೌಲಭ್ಯ ಪಡೆದಿದ್ದು, ನಿಗದಿತ ಸಮಯಕ್ಕೆ ಕಂತು ಪಾವತಿಯಾಗದೆ ಸಾಲದ ಹೊರೆ ಹೆಚ್ಚಾಗುತ್ತಿದೆ ಎಂದು ಸಂಘ ಪತ್ರದಲ್ಲಿ ಅರಿಕೆ ಮಾಡಿಕೊಂಡಿದೆ.

ಎಚ್‌ಆರ್‌ಎಂಎಸ್ ಪದ್ಧತಿ ವಿಶ್ವವಿದ್ಯಾಲಯದ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತಿದೆ. ಇದು ವಿಶ್ವವಿದ್ಯಾಲಯ ಸ್ಥಾಪನೆಯ ಮೂಲ ಉದ್ದೇಶಕ್ಕೆ ಧಕ್ಕೆ ತರುತ್ತಿರುವುದಲ್ಲದೆ, ಶೈಕ್ಷಣ ಚಟುವಟಿಕೆಗಳಿಗೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ ವಿವಿಗಳಲ್ಲಿ ಹೊಸದಾಗಿ ಜಾರಿಗೆ ತಂದಿರುವ ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯನ್ನು ರದ್ಧುಪಡಿಸುವಂತೆ ಮನವಿ ಮಾಡಿಕೊಂಡಿದೆ.

ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಅಬ್ದುಲ್ ಅಲಿ ಮತ್ತಿತರ ಪದಾಧಿಕಾರಿಗಳು, ಅಧ್ಯಾಪಕೇತರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ...

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ಜನ ಸಂಪರ್ಕ ಸಭೆ

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು...

B.Y. Vijayendra ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಭಂಡತನದ ಪರಾಕಾಷ್ಠತೆ- ಬಿ.ವೈ.ವಿಜಯೇಂದ್ರ

B.Y. Vijayendra ಯಾವ ಮಹತ್ಸಾಧನೆಗಾಗಿ ಕಾಂಗ್ರೆಸ್ ‌ ಸರ್ಕಾರ ಮೂರು ವರ್ಷದ...