Saturday, March 28, 2026
Saturday, March 28, 2026

ಜಾನುವಾರಿಗೇನು ಗೊತ್ತು ಜನನಾಯಕರ ಗುರುತು

Date:

ಒಂದು ನಿಮಿಷದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಮಾತನ್ನು ಸಾಮಾನ್ಯವಾಗಿ ಕೇಳಿರುತ್ತೇವೆ. ಹಾಗೆ ಒಂದು ನಿಮಿಷದಲ್ಲಿ ಆಗುವ ಅನಾಹುತಗಳನ್ನು ಕೂಡ ತಪ್ಪಿಸುವ ಅದೇಷ್ಟೋ ಪ್ರಸಂಗಗಳನ್ನು ನೋಡಿರುತ್ತೇವೆ. ಅದೇ ರೀತಿ ಇಲ್ಲೊಂದು ಅಪಾಯವನ್ನು ತಪ್ಪಿಸುವ ಘಟನೆ ನಡೆದಿದೆ.

ಸಾಮಾನ್ಯವಾಗಿ ಪ್ರಾಣಿಗಳನ್ನು ಕಂಡರೆ ಅವುಗಳನ್ನು ಮುದ್ದಿಸುವುದು ಮನುಷ್ಯನ ಸಹಜ ಗುಣ. ಅದೇ ರೀತಿ ರೈತರು ಯಾವುದೇ ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡಬೇಕಾದರೆ, ಮೊದಲು ಗೋವುಗಳಿಗೆ ಪೂಜೆ ಸಲ್ಲಿಸುತ್ತಾರೆ. ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೂದಿಹಾಳ ಪಿರಾಪುರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲು ವಿಜಯಪುರ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಮಂಗಳವಾರ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಆಕಸ್ಮಿಕ ಘಟನೆಯೊಂದು ನಡೆದಿದೆ. ಅದೇನು ಅಂತ ಯೋಚಿಸುತ್ತಿದ್ದೀರಾ. ಮನುಷ್ಯರಿಗೆ ಬುದ್ಧಿ ಇರುತ್ತೆ, ಯಾವ ವ್ಯಕ್ತಿಗಳು ಯಾವ ಸ್ಥಾನದಲ್ಲಿದ್ದಾರೆ ಎಂದು ತಿಳಿದಿರುತ್ತದೆ. ಆದರೆ ಪ್ರಾಣಿಗಳಿಗೆ ಈ ವಿಚಾರ ತಿಳಿದಿತ್ತೆ? ಪ್ರಾಣಿ ಪ್ರೀತಿಯಿಂದ ಮುಖ್ಯಮಂತ್ರಿಗಳು ಗೋವಿಗೆ ಮುತ್ತಿಡಲು ಹೋದಾಗ, ಗೋವು ಗಾಬರಿಗೊಂಡು ತನ್ನ ಕೋಡಿನಿಂದ ಇರಿಯಲು ಮುಂದಾಗಿರುವ ಘಟನೆ ನಡೆದಿದೆ. ಈ ವಿಚಾರ ಎಲ್ಲೆಡೆ ವೈರಲ್ ಆಗಿದೆ.

ನಿಜಾಂಶ ವೇನು ಎಂದರೆ ನೆರೆದಿರುವ ಸಾವಿರಾರು ಮಂದಿಯನ್ನು ನೋಡಿ ಗೋವು ಗಾಬರಿಗೊಂಡಿದೆ. ಆದ್ದರಿಂದ ಆಕಸ್ಮಿಕ ಘಟನೆ ನಡೆದಿದೆ. ಗೋವು ತನ್ನ ಕೋಡಿನಿಂದ ತಿವಿಯಲು ಮುಂದಾದಾಗ ಅಲ್ಲಿರುವ ರೈತರು ಆಗುವ ಅಪಾಯವನ್ನು ತಪ್ಪಿಸಿದ್ದಾರೆ. ಕ್ಷಣಾರ್ಧದಲ್ಲಿ ಆಗುವ ಅಪಾಯದಿಂದ ಮುಖ್ಯಮಂತ್ರಿ ಗಳು ಪಾರಾಗಿದ್ದಾರೆ.

ಹೀಗೆ ಅನೇಕ ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಲೇ ಇರುತ್ತದೆ. ಒಂದು ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೊಂದು ಉದಾಹರಣೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...