Thursday, February 5, 2026
Thursday, February 5, 2026

ಬಿಜೆಪಿಯೇತರ ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಸಲು ಪ್ರಧಾನಿ ಮನವಿ

Date:

ಕೊರೋನಾ ಸವಾಲು ಇನ್ನೂ ಮುಗಿದಿಲ್ಲ. ಶಾಲೆ ಆರಂಭದ ಸಮಯದಲ್ಲಿ ಕೊರೋನಾ 4ನೇ ಅಲೆಯ ಭೀತಿ ಇದೆ.
ಓಮಿಕ್ರಾನ್ ಉಪತಳಿ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಆರಂಭಿಕ ಹಂತದಲ್ಲೇ ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ದೇಶದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು. ಅಷ್ಟೇ ಅಲ್ಲ ದೇಶದಲ್ಲಿರುವ ಬಿಜೆಪಿಯೇತರ ರಾಜ್ಯಗಳಲ್ಲಿ ಪೆಟ್ರೋಲ್​, ಡಿಸೇಲ್​ ದರ ಕಡಿಮೆ ಮಾಡಿ ಎಂದು ಮನವಿ ನೀಡಿದ್ದಾರೆ.

ದೇಶದಲ್ಲಿ ಕೊರೋನಾ 4ನೇ ಅಲೆ ಆತಂಕ ಹಿನ್ನೆಲೆ ಬುಧವಾರ ಬೆಳಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್​ ಸಭೆ ನಡೆಸಿದ ಪ್ರಧಾನಿ, ನಂತರ ಮಾತನಾಡಿದರು. ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಎಲ್ಲರಿಗೂ ಕೊರೋನಾ 2 ಲಸಿಕೆ ನೀಡಲಾಗಿದೆ. ಬೂಸ್ಟರ್​​ ಡೋಸ್​ ನೀಡಲಾಗುತ್ತಿದೆ. 6-12 ವರ್ಷದ ಮಕ್ಕಳಿಗೂ ಕೊರೋನಾ ಸಲಿಕೆ ಹಾಕಲು ಅನುಮತಿ ಸಿಕ್ಕಿದೆ. ಎಲ್ಲ ಮಕ್ಕಳಿಗೂ ಆದಷ್ಟು ಬೇಗ ಲಸಿಕೆ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಹಲವು ಶಾಲೆಗಳು ಆರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕೊರೋನಾ 4ನೇ ಅಲೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಸಿದೆ. ಕೊರೋನಾದಿಂದ ಬಚಾವ್​ ಆಗಲು ಲಸಿಕೆ ಅತ್ಯಗತ್ಯ. ದೇಶದ ಅಭಿವೃದ್ಧಿ ಜೊತೆಗೆ ಕೊರೋನಾ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರತವಾಗಿವೆ. ಸಾರ್ವಜನಿಕರ ಹಿತದೃಷ್ಟಿಯ ನಿಟ್ಟಿನಲ್ಲಿ ಕಾರ್ಯ ಭರದಿಂದ ಸಾಗಿದೆ ಎಂದರು.

ಕೊರೋನಾ ಸಂದರ್ಭದಲ್ಲಿ ಜನರಿಗೆ ಹೊರೆಯಾಗುತ್ತೆ. ಗುವಾಹಟಿಯಲ್ಲಿ 1 ಲೀಟರ್​ ಪೆಟ್ರೋಲ್​ ಬೆಲೆ 103 ರೂ. ಇದೆ. ಆದರೆ ಮುಂಬೈನಲ್ಲಿ 120 ರೂಪಾಯಿ ಇದೆ. ಎಲ್ಲೆಲ್ಲಿ ಬೆಲೆ ಹೆಚ್ಚಳ ಇದೆಯೋ ಸುಂಕ ಕಡಿಮೆ ಮಾಡಿ ಎಂದು ಮನವಿ ಮಾಡಿದ ಪ್ರಧಾನಿ ಅವರು, ಕೊರೋನಾ ಸಂಕಷ್ಟ ಕಾಲದಲ್ಲಿ ಜನರಿಗೆ ಹೊರೆ ಆಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಹಿಂದೆ ಸುಂಕ ಕಡಿಮೆ ಮಾಡುವಂತೆ ಕೇಂದ್ರದಿಂದ ಸೂಚನೆ ನೀಡಲಾಗಿತ್ತು. ಆದರೆ, ಬಿಜೆಪಿಯೇತರ ಕೆಲ ರಾಜ್ಯಗಳಲ್ಲಿ ಇಳಿಕೆ ಮಾಡಿಲ್ಲ. ಕರ್ನಾಟಕ ಮತ್ತು ಗುಜರಾತ್​ನಲ್ಲಿ ಕಳೆದ ನವೆಂಬರ್​ನಲ್ಲಿ ಇಳಿಕೆ ಮಾಡಲಾಗಿತ್ತು. ಈ ವಿಚಾರದಲ್ಲಿ ಎರಡೂ ರಾಜ್ಯಗಳು ಮಾದರಿ ಎಂದು ಪ್ರಧಾನಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...