Monday, August 24, 2026
Monday, August 24, 2026

ಬಿಜೆಪಿಯೇತರ ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಸಲು ಪ್ರಧಾನಿ ಮನವಿ

Date:

ಕೊರೋನಾ ಸವಾಲು ಇನ್ನೂ ಮುಗಿದಿಲ್ಲ. ಶಾಲೆ ಆರಂಭದ ಸಮಯದಲ್ಲಿ ಕೊರೋನಾ 4ನೇ ಅಲೆಯ ಭೀತಿ ಇದೆ.
ಓಮಿಕ್ರಾನ್ ಉಪತಳಿ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಆರಂಭಿಕ ಹಂತದಲ್ಲೇ ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ದೇಶದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು. ಅಷ್ಟೇ ಅಲ್ಲ ದೇಶದಲ್ಲಿರುವ ಬಿಜೆಪಿಯೇತರ ರಾಜ್ಯಗಳಲ್ಲಿ ಪೆಟ್ರೋಲ್​, ಡಿಸೇಲ್​ ದರ ಕಡಿಮೆ ಮಾಡಿ ಎಂದು ಮನವಿ ನೀಡಿದ್ದಾರೆ.

ದೇಶದಲ್ಲಿ ಕೊರೋನಾ 4ನೇ ಅಲೆ ಆತಂಕ ಹಿನ್ನೆಲೆ ಬುಧವಾರ ಬೆಳಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್​ ಸಭೆ ನಡೆಸಿದ ಪ್ರಧಾನಿ, ನಂತರ ಮಾತನಾಡಿದರು. ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಎಲ್ಲರಿಗೂ ಕೊರೋನಾ 2 ಲಸಿಕೆ ನೀಡಲಾಗಿದೆ. ಬೂಸ್ಟರ್​​ ಡೋಸ್​ ನೀಡಲಾಗುತ್ತಿದೆ. 6-12 ವರ್ಷದ ಮಕ್ಕಳಿಗೂ ಕೊರೋನಾ ಸಲಿಕೆ ಹಾಕಲು ಅನುಮತಿ ಸಿಕ್ಕಿದೆ. ಎಲ್ಲ ಮಕ್ಕಳಿಗೂ ಆದಷ್ಟು ಬೇಗ ಲಸಿಕೆ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಹಲವು ಶಾಲೆಗಳು ಆರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕೊರೋನಾ 4ನೇ ಅಲೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಸಿದೆ. ಕೊರೋನಾದಿಂದ ಬಚಾವ್​ ಆಗಲು ಲಸಿಕೆ ಅತ್ಯಗತ್ಯ. ದೇಶದ ಅಭಿವೃದ್ಧಿ ಜೊತೆಗೆ ಕೊರೋನಾ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರತವಾಗಿವೆ. ಸಾರ್ವಜನಿಕರ ಹಿತದೃಷ್ಟಿಯ ನಿಟ್ಟಿನಲ್ಲಿ ಕಾರ್ಯ ಭರದಿಂದ ಸಾಗಿದೆ ಎಂದರು.

ಕೊರೋನಾ ಸಂದರ್ಭದಲ್ಲಿ ಜನರಿಗೆ ಹೊರೆಯಾಗುತ್ತೆ. ಗುವಾಹಟಿಯಲ್ಲಿ 1 ಲೀಟರ್​ ಪೆಟ್ರೋಲ್​ ಬೆಲೆ 103 ರೂ. ಇದೆ. ಆದರೆ ಮುಂಬೈನಲ್ಲಿ 120 ರೂಪಾಯಿ ಇದೆ. ಎಲ್ಲೆಲ್ಲಿ ಬೆಲೆ ಹೆಚ್ಚಳ ಇದೆಯೋ ಸುಂಕ ಕಡಿಮೆ ಮಾಡಿ ಎಂದು ಮನವಿ ಮಾಡಿದ ಪ್ರಧಾನಿ ಅವರು, ಕೊರೋನಾ ಸಂಕಷ್ಟ ಕಾಲದಲ್ಲಿ ಜನರಿಗೆ ಹೊರೆ ಆಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಹಿಂದೆ ಸುಂಕ ಕಡಿಮೆ ಮಾಡುವಂತೆ ಕೇಂದ್ರದಿಂದ ಸೂಚನೆ ನೀಡಲಾಗಿತ್ತು. ಆದರೆ, ಬಿಜೆಪಿಯೇತರ ಕೆಲ ರಾಜ್ಯಗಳಲ್ಲಿ ಇಳಿಕೆ ಮಾಡಿಲ್ಲ. ಕರ್ನಾಟಕ ಮತ್ತು ಗುಜರಾತ್​ನಲ್ಲಿ ಕಳೆದ ನವೆಂಬರ್​ನಲ್ಲಿ ಇಳಿಕೆ ಮಾಡಲಾಗಿತ್ತು. ಈ ವಿಚಾರದಲ್ಲಿ ಎರಡೂ ರಾಜ್ಯಗಳು ಮಾದರಿ ಎಂದು ಪ್ರಧಾನಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...