Sunday, December 7, 2025
Sunday, December 7, 2025

ಸದ್ಯದಲ್ಲೇ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಕೇಂದ್ರದ ಮಾರ್ಗಸೂಚಿ

Date:

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ,ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್‌ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ನೂತನ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹೊಸ ವಾಹನಗಳ ಬಿಡುಗಡೆ ಮುಂದೂಡುವಂತೆ ಮನವಿ ಮಾಡಲಾಗಿದೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ತಿಳಿಸಿದ್ದಾರೆ.

ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಇದರಲ್ಲಿ ವಾಹನ ತಯಾರಕರ ಅಥವಾ ಗ್ರಾಹಕರ ಪ್ರಮಾದ ಇದೆಯೇ ಎಂಬ ಕುರಿತು ಸರ್ಕಾರ ಸ್ಪಷ್ಟನೆ ಬಯಸಿದೆ. ತನಿಖಾ ವರದಿಯನ್ನು ಆಧರಿಸಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಕುರಿತು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಸಚಿವಾಲಯದ ಮನವಿಗೆ ಎಲೆಕ್ಟ್ರಿಕ್ ವಾಹನ ಉತ್ಪಾದಕ ಕಂಪನಿಗಳು ಧನಾತ್ಮಕವಾಗಿ ಸ್ಪಂದಿಸಿದೆ. ಸಂಪೂರ್ಣ ಸಹಕಾರದ ಭರವಸೆ ನೀಡಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಾರ್ಜಿಂಗ್ ಸುರಕ್ಷತೆ ಹಾಗೂ ಅಗ್ನಿ ಅವಘಡಗಳನ್ನು ತಪ್ಪಿಸುವುದು ಹೇಗೆ? ಎಂಬ ಬಗ್ಗೆ ಗ್ರಾಹಕರಿಗೆ ತಿಳುವಳಿಕೆ ನೀಡುವಂತೆ ಸಚಿವಾಲಯ ಕೋರಿದೆ.

ಅಗ್ನಿ ಅವಘಡಗಳ ನಂತರ ಕೇಂದ್ರ ಸರ್ಕಾರ ರಚಿಸಿರುವ ತಜ್ಞರ ಸಮಿತಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...