Monday, February 2, 2026
Monday, February 2, 2026

ಜನಾಭಿಪ್ರಾಯ ಆಧರಿಸಿ ಬಿಜೆಪಿ ಸೇರ್ಪಡೆ ನಿರ್ಧಾರ- ಸುಮಲತಾ

Date:

ನಾನು ಬಿಜೆಪಿಗೆ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಈ‌ ಕಾರಣದಿಂದ ಮುಖಂಡರನ್ನು ನಿಧಿ ಬಗ್ಗೆ ತಿಳಿಸುತ್ತಿದ್ದೇನೆ. ಮುಖಂಡರು ಹಿಂದೆ ಫಂಡ್ ಬಗ್ಗೆ ಕೇಳಿದ್ದರು. ಈ ಬಗ್ಗೆ ಪ್ರಸ್ತಾಪ ಮಾಡಲು ಅವರನ್ನು ಸಭೆ ಕರೆದಿದ್ದೇನೆ. ಈ ಸಭೆ ಬಿಜೆಪಿ ಸೇರುವ ಬಗ್ಗೆ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ. ಈಗ ಈ ಪ್ರಸ್ತಾಪ ಇಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಇದನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಜನರು ಏನು ಅಭಿಪ್ರಾಯ ಹೇಳಿದ್ದಾರೆ. ಅದನ್ನು ಹೇಳಲ್ಲ. ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ನಾನು ಏನು ಹೇಳಲ್ಲ. ಎಲ್ಲರೂ ಸ್ವತಂತ್ರರು ಯಾವ ಪಕ್ಷಕ್ಕಾದ್ರು ಸೇರಬಹುದು. ನನ್ನ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷದವರು ದುಡಿದಿದ್ದಾರೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...