Tuesday, December 16, 2025
Tuesday, December 16, 2025

ಹಿಂದಿ ಹೇರಲು ಪ್ರಯತ್ನಿಸಿಲ್ಲ. ಪ್ರಾದೇಶಿಕ ಭಾಷೆಗಳಿಗೇ ಪ್ರಾಮುಖ್ಯತೆ-ಪ್ರಧಾನ್

Date:

ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ನಟ ಸುದೀಪ್ ನೀಡಿದ ಖಡಕ್ ಅಭಿಪ್ರಾಯ ದೇಶದಲ್ಲೇ ಸದ್ದು ಮಾಡುತ್ತಿದೆ. ಇದೇ ವೇಳೆ ರಾಜಕೀಯ ನಾಯಕರ ಅಭಿಪ್ರಾಯ ಕೇಳುವ ತವಕ‌ ಅನೇಕರಿಗಿರುತ್ತದೆ. ಅವರು ಹೌದು ಎಂದರೂ ತಪ್ಪು, ಇಲ್ಲ ಎಂದರೂ ತಪ್ಪು, ರಾಜಕೀಯವಾಗಿ ಪರಿಣಾಮ ಬೀರಲಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆಂಗಳೂರಲ್ಲಿ ತಮ್ಮ ಅಭಿಪ್ರಾಯ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆ ಎಂದು ಕೇಂದ್ರ ಸರ್ಕಾರ ಎಲ್ಲಿಯೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಹೇಳಿದರು.
ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಹೆಚ್ಚಿನ ಜನಸಂಖ್ಯೆಯು ಹಿಂದಿ ಮಾತನಾಡುವುದರಿಂದ ಅದು ರಾಷ್ಟ್ರೀಯ ಭಾಷೆಯಾಗುವುದಿಲ್ಲ ಹೇಳಿದರು.

ನಾವು ಹಿಂದಿ ಹೇರಲು ಪ್ರಯತ್ನಿಸುತ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಿದ್ದೇವೆ. ಯಾರೂ ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುವಂತಿಲ್ಲ ಎಂದರು.

ಹಿಂದಿಯ ವಿಷಯವಾಗಿ ಬಾಲಿವುಡ್ ನಟ ದೇವಗನ್ ಹೇಳಿದ ಹಾಗೂ ಸುದೀಪ್ ನಡುವೆ ನಡೆದ ಟಗ್‌ ಆಫ್‌ ವಾರ್ ನಡೆದಿದ್ದು ದೇಶದ ಗಮನ ಸೆಳೆದಿದೆ. ಸುದೀಪ್ ಹೇಳಿದ್ದು ಸರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾಷಾವಾರು ರಾಜ್ಯಗಳ ಮರು ಹಂಚಿಕೆಯ ನಂತರ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆ ಮುಖ್ಯವಾಗುತ್ತದೆ ಮತ್ತು ರಾಜ್ಯಗಳಲ್ಲಿ ಆ ಭಾಷೆ ಸರ್ವೋಚ್ಚ. ಅದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಮತ್ತು ಗೌರವಿಸಬೇಕು ಎಂದು ಬೊಮ್ಮಾಯಿ ಹೇಳಿದರು.

ನಾವು ಹಿಂದಿ ಹೇರಲು ಪ್ರಯತ್ನಿಸುತ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಿದ್ದೇವೆ. ಯಾರೂ ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುವಂತಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...