Friday, May 22, 2026
Friday, May 22, 2026

ಸುಮಾತ್ರಾ ದ್ವೀಪದಲ್ಲಿ ಚಿನ್ನದಗಣಿ ಕುಸಿದು 12 ಸಾವು

Date:

ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಅನಧಿಕೃತ ಚಿನ್ನದ ಗಣಿಗಾರಿಕೆ ನಡೆಯುತ್ತದ್ದಾಗ ಭೂಕುಸಿತ ಸಂಭವಿಸಿದ್ದ 12 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಎರಡು ಗಂಟೆಗಳ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಗಾಯಗೊಂಡ ಇಬ್ಬರು ಮಹಿಳೆಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಮತ್ತು 12 ಇತರ ಮಹಿಳೆಯರ ದೇಹಗಳನ್ನು ಅವಶೇಷಗಳಿಂದ ಹೊರತೆಗೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಮರ್ಲಾನ್ ರಾಜಗುಕ್ಗುಕ್ ಹೇಳಿದರು.

ಉತ್ತರ ಸುಮಾತ್ರದ ಮಾಂಡೈಲಿಂಗ್ ನಟಾಲ್ ಜಿಲ್ಲೆಯಯ ಹಳ್ಳಿಯೊಂದರಲ್ಲಿ ಸ್ಥಳೀಯ ಗ್ರಾಮದ ಮಹಿಳೆಯರು ಚಿನ್ನದ ಗಣಿಯ ವಯಯದಲ್ಲಿ ಸುಮಾರು 2 ಮೀಟರ್ (6.5 ಅಡಿ) ಆಳದ ಹೊಂಡ ತೆಗೆದು ನಿನ್ನೆ ಸಂಜೆ ಚಿನ್ನದ ಮೆತ್ತಿರುವ ಕಲ್ಲು ಹೊಡೆದು ಸಂಗ್ರಹಿಸುವ ವೇಳೆ ಭೂಕುಸಿತ ಉಂಟಾಗಿದೆ.

ಇಲ್ಲಿನ ಬೆಟ್ಟ ಗುಡ್ಡದಲ್ಲಿ ಚಿನ್ನದ ನಿಕ್ಷೇಪ ವಿದ್ದು ಅದನ್ನು ತೆಗೆಯಲು ಸ್ತಳೀಯರು ಅಪಾಯವನ್ನು ಲೆಕ್ಕಿಸದೆ ಸಾಂಪ್ರದಾಯಕವಾಗಿ ಸಣ್ಣ ಗಣಿಗಾರಿಕೆ ನಡೆಸುತ್ತಾರೆ. ಚಿನ್ನದ ಮುಖ್ಯ ಮೂಲವಾಗಿದ್ದ ಈ ಪ್ರದೇಶದಲ್ಲಿ ಅಕಾರಿಗಳು ಅಕ್ರಮ ಚಿನ್ನದ ಹೊಂಡಗಳನ್ನು ಮುಚ್ಚಿದ್ದಾರೆ ಆದರೂ ಇಂಡೋನೇಷ್ಯಾದಲ್ಲಿ ಅನೌಪಚಾರಿಕ ಗಣಿಗಾರಿಕೆ ಕಾರ್ಯಾಚರಣೆಗಳು ಸಾಮಾನ್ಯವಾಗಿದೆ. ಹೆಚ್ಚಿನ ಅಪಾಯವಿರುವ ಪರಿಸ್ಥಿತಿಗಳಲ್ಲಿ ಕೆಲಸ ಮಾಡುವ ಸಾವಿರಾರು ಜನರಿಗೆ ಅಲ್ಪ ಜೀವನೋಪಾಯವನ್ನು ಒದಗಿಸುತ್ತದೆ ಎಂದು ತಿಳಿದುಬಂದಿದೆ.

ಕಳೆದ ಫೆಬ್ರವರಿ 2019 ರಲ್ಲಿ ಉತ್ತರ ಸುಲವೆಸಿ ಪ್ರಾಂತ್ಯದ ಅಕ್ರಮ ಚಿನ್ನದ ಗಣಿಗಾರಿಕೆ ವೇಳೆ ಭೂಕುಸಿತ ಉಂಟಾಂಗಿ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...