Saturday, March 28, 2026
Saturday, March 28, 2026

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...