Thursday, January 22, 2026
Thursday, January 22, 2026

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...